ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ನ್ಯಾ.ಪಿ.ವಿ.ರೆಡ್ಡಿ, ಅಶೋಕ್‌ ಭಾನ್‌

By Staff
|
Google Oneindia Kannada News

ಬೆಂಗಳೂರು : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪಿ. ವೆಂಕಟರಾಮ ರೆಡ್ಡಿ (ಪಿ.ವಿ. ರೆಡ್ಡಿ) ಹಾಗೂ ಹಿರಿಯ ನ್ಯಾಯಮೂರ್ತಿ ಅಶೋಕ್‌ ಭಾನ್‌ ಅವರನ್ನು ಸರ್ವೋನ್ನತ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.

ಮೂಲಗಳ ಪ್ರಕಾರ ಈ ಇಬ್ಬರು ನ್ಯಾಯಮೂರ್ತಿಗಳು ಆಗಸ್ಟ್‌ 16 ಅಥವಾ 17ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಕಳೆದ ವರ್ಷ ಅಕ್ಟೋಬರ್‌ 21ರಂದು ನ್ಯಾ. ಪಿ.ವಿ. ರೆಡ್ಡಿ ಅವರು, ಬೆಂಗಳೂರಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ನ್ಯಾಯಮೂರ್ತಿ ವೈ. ಭಾಸ್ಕರ್‌ ರಾವ್‌ ಅವರ ನಿವೃತ್ತಿಯಿಂದ ತೆರವಾಗಿದ್ದ ಹುದ್ದೆಯನ್ನು ನ್ಯಾ. ಪಿ.ವಿ. ರೆಡ್ಡಿ ಅವರು ಅಲಂಕರಿಸುವವರೆಗಿನ ಅಲ್ಪಾವಧಿಯಲ್ಲಿ ನ್ಯಾಯಮೂರ್ತಿ ಅಶೋಕ್‌ ಭಾನ್‌ ಅವರು ರಾಜ್ಯ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿದ್ದರು.

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X