ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೆ ಮೇಲ್ಮನೆ ಅಂಗೀಕಾರ
ಬೆಂಗಳೂರು : ಪ್ರತಿಪಕ್ಷ ನಾಯಕರ ಸಭಾತ್ಯಾಗದ ನಡುವೆಯೂ ಕರ್ನಾಟಕ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ -2000 ಯಾವುದೇ ಬದಲಾವಣೆ ಇಲ್ಲದೆ ವಿಧಾನಪರಿಷತ್ತಿನಲ್ಲಿ ಮಂಗಳವಾರ ಧ್ವನಿ ಮತದ ಮೂಲಕ ಅನುಮೋದನೆ ಪಡೆಯಿತು.
ಪ್ರತಿಪಕ್ಷಗಳಾದ ಸಂಯುಕ್ತ ಜನತಾದಳ, ಜಾತ್ಯತೀತ ಜನತಾದಳ, ಬಿ.ಜೆಪಿ ಸದಸ್ಯರ ಪ್ರತಿರೋಧ, ಸಭಾತ್ಯಾಗದ ಬಳಿಕ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸದಸ್ಯರು ಈ ವಿವಾದಾತ್ಮಕ ತಿದ್ದುಪಡಿ ವಿಧೇಯಕಕ್ಕೆ ಧ್ವನಿಮತದ ಅಂಗೀಕಾರ ನೀಡಿದರು.
ವಿ.ವಿ. ತಿದ್ದುಪಡಿ ವಿಧೇಯಕದ ಬಗ್ಗೆ ನಡೆದ ಸುದೀರ್ಘ ಚರ್ಚೆಯ ನಂತರ ಪ್ರತಿಪಕ್ಷ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಿದ ರಾಜ್ಯ ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್ ಅವರು, ವಿಶ್ವವಿದ್ಯಾಲಯಗಳ ಆಡಳಿತ ಸುಧಾರಣೆಗೆ ಈ ವಿಧೇಯಕ ನೆರವಾಗುತ್ತದೆ ಎಂದು ಬಲವಾಗಿ ಸಮರ್ಥಿಸಿಕೊಂಡರು. ವಿ.ವಿ.ಗಳ ಶೈಕ್ಷಣಿಕ ಸ್ವಾಯತ್ತತೆ ವಿಚಾರದಲ್ಲಿ ಸರಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗದ ಸಲಹೆಗನುಗುಣವಾಗಿ ಹಾಗೂ ಡಾ. ನವನೀತರಾಮ್ ನೀಡಿರುವ ವರದಿಯ ಅನ್ವಯ ಸೆನೆಟ್ ರದ್ದು ಮೊದಲಾದ ಮಹತ್ವದ ಕ್ರಮ ಕೈಗೊಳ್ಳಾಗಿದೆ ಎಂದು ಸಚಿವರು ತಿಳಿಸಿದರು. ಸೆನೆಟ್ ರದ್ದು ವಿಚಾರದಲ್ಲಿ ಬಿಗಿ ನಿಲುವು ತಳೆದಿದ್ದ ಪ್ರತಿಪಕ್ಷ ಸದಸ್ಯರು ಸಚಿವರ ಉತ್ತರದಿಂದ ತೃಪ್ತರಾಗದೆ, ಸಭಾತ್ಯಾಗ ಮಾಡಿದರು.
ಈ ತಿಂಗಳ ಆರಂಭದಲ್ಲಿ ವಿಧಾನಸಭೆಯು ವಿ.ವಿ. ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸಿದ್ದಾಗ್ಯೂ, ಮೇಲ್ಮನೆಯಲ್ಲಿ ಪ್ರತಿಪಕ್ಷ ಸದಸ್ಯರು ಸಭಾತ್ಯಾಗ ಮಾಡುವ ಮೂಲಕ ಕೆಳಮನೆಗೆ ಅಪಮಾನ ಎಸಗಿದ್ದಾರೆ ಎಂದು ಸಚಿವ ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು. ಪ್ರತಿಪಕ್ಷ ಸದಸ್ಯರ ಅನುಪಸ್ಥಿತಿಯಲ್ಲಿ ಸಭಾಪತಿ ಬಿ.ಎಲ್. ಶಂಕರ್ ಧ್ವನಿ ಮತದ ಮೂಲಕ ವಿಧೇಯಕವನ್ನು ಅಂಗೀಕರಿಸಿದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications