ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ನೆರವು: ಎಸ್.ಎಂ.ಕೃಷ್ಣ ಒತ್ತಾಯ
ಬೆಂಗಳೂರು : ಮುಂಬಯಿ, ಹೈದರಾಬಾದ್ ಹಾಗೂ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ವಿಶೇಷ ನೆರವು ನೀಡಿರುವಂತೆಯೇ ರಾಜ್ಯದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೂ ವಿಶೇಷ ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಕೃಷ್ಣ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.ಗುರುವಾರ ಮಧ್ಯಾಹ್ನ ಮೇಖ್ರೀ ವೃತ್ತದ ರಸ್ತೆ ವಿಭಜಕವನ್ನು ನಗರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಕೇಂದ್ರದಲ್ಲಿ ಆಡಳಿತದಲ್ಲಿದ್ದ ಹಿಂದಿನ ಸರಕಾರಗಳು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ನೆರವು ನೀಡುತ್ತಾ ಬಂದಿವೆ. ಆದರೆ, ರಾಜ್ಯಕ್ಕೆ ಮಾತ್ರ ಆ ವಿಶೇಷ ನೆರವು ದೊರೆತಿಲ್ಲ ಎಂದು ಆರೋಪಿಸಿದರು.
ರಾಷ್ಟ್ರದ ಎಲ್ಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಂದ 100 ರುಪಾಯಿ ಶುಲ್ಕ ಪಡೆಯಲಾಗುತ್ತದೆ. ಆ ಹಣವನ್ನು ರಾಷ್ಟ್ರದ ಬೇರೆಕಡೆಗಳಲ್ಲಿ ನಿರ್ಮಿಸುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಳಸಲಾಗುತ್ತದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ತಾವು ಕಳೆದ ಆರು ತಿಂಗಳಿನಿಂದಲೂ ಪ್ರಧಾನಿಯವರಿಗೆ ಈ ಬಗ್ಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ ಸಂಸತ್ ಸದಸ್ಯರು ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕು ಎಂದು ಅವರು ಕರೆ ನೀಡಿದರು.
ದೇವನಹಳ್ಳಿಯ ಉದ್ದೇಶಿತ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸ್ಥಾಪನೆಗೆ ಕನಿಷ್ಠ 3 ಸಾವಿರ ರುಪಾಯಿಗಳು ಬೇಕು. ರಾಜ್ಯ ಸರ್ಕಾರ ಶಕ್ತಿ ಮೀರಿ ಇದಕ್ಕೆ ಹಣ ವಿನಿಯೋಗಿಸುತ್ತಿದೆ. ಕೇಂದ್ರ ಇದಕ್ಕೆ ಪೂರಕವಾಗಿ ನೆರವು ನೀಡಬೇಕು ಎಂದು ಅವರು ಆಗ್ರಹಿಸಿದರು.
ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾ ಕಾರ್ಯಪ್ಪ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಾಫರ್ ಷರೀಫ್, ಸಚಿವರಾದ ಪ್ರೊ. ಬಿ.ಕೆ. ಚಂದ್ರಶೇಖರ್, ಎ. ಕೃಷ್ಣಪ್ಪ, ನಫೀಸಾ ಫಜಲ್, ಪ್ರತಿಪಕ್ಷ ನಾಯಕರಾದ ಕೆ.ಎಚ್. ಶ್ರೀನಿವಾಸ್, ಶಾಸಕ ಸುರೇಶ್ ಕುಮಾರ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮೊದಲಾದವರು ಪಾಲ್ಗೊಂಡಿದ್ದರು.
ಬಹಿಷ್ಕಾರ : ಮೇಖ್ರೀ ವೃತ್ತದ ರಸ್ತೆ ವಿಭಜಕವನ್ನು ಸಮರ್ಪಿಸುವ ಕಾರ್ಯಕ್ರಮ ಸಂಪೂರ್ಣವಾಗಿ ಕಾಂಗ್ರೆಸ್ ಸಾಧನೆಯ ಸಮಾವೇಶವಾದ ಕಾರಣ ತಾವು ಇದನ್ನು ಪ್ರತಿಭಟಿಸಿ ಕಾರ್ಯಕ್ರಮ ಬಹಿಷ್ಕರಿಸಿದ್ದಾಗಿ ಭಾರತೀಯ ಜನತಾಪಕ್ಷದ ಶಾಸಕರಾದ ಸುರೇಶ್ ಕುಮಾರ್ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ದು ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications