ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಗೊಮ್ಮಟಗಿರಿಯ ಬಾಹುಬಲಿಗೆ ಸೆ.30ರಂದು ಮಸ್ತಕಾಭಿಷೇಕ
ಮೈಸೂರು : ಶ್ರವಣಬೆಳಗೊಳದ ಗೊಮ್ಮಟೇಶ್ವರನಿಗೆ ಮಹಾಮಸ್ತಕಾಭಿಷೇಕ ನಡೆಯುವ ಮಾದರಿಯಲ್ಲೇ ಹುಣಸೂರು ತಾಲೂಕು ಬಿಳಿಕೆರೆ ಹೋಬಳಿಯಲ್ಲಿರುವ ಬೆಟ್ಟಮಾರು ಗ್ರಾಮದ ಗೊಮ್ಮಟಗಿರಿ ಕ್ಷೇತ್ರದಲ್ಲಿ ರುವ ಬಾಹುಬಲಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಮಸ್ತಕಾಭಿಷೇಕ ನಡೆಯಲಿದೆ.
ಸೆಪ್ಟೆಂಬರ್ 30ರಂದು ಇಲ್ಲಿ ಬಾಹುಬಲಿಗೆ 52ನೇ ಮಹಾ ಮಸ್ತಕಾಭಿಷೇಕ ಜರುಗಲಿದೆ. ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮಿಗಳ ಸಮ್ಮುಖದಲ್ಲಿ ಹಾಗೂ ಹೊಂಬುಜ ಜೈನಮಠದ ಆಶ್ರಯದಲ್ಲಿ ಸೆಪ್ಟೆಂಬರ್ 30ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಮಸ್ತಕಾಭಿಷೇಕ ನೆರವೇರಲಿದೆ ಎಂದು ಗೊಮ್ಮಟಗಿರಿ ಕ್ಷೇತ್ರ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Thursday, August 16, 2001, 0:00 [IST]