ಆ.22 ರಿಂದ ಮುಂಬಯಿಯಲ್ಲಿ ಬಸ್,ಆಸ್ಪತ್ರೆ,ನೀರು...ಎಲ್ಲವೂ ಉಚಿತ!
ಮುಂಬಯಿ : ಇತ್ತೀಚೆಗೆ ಮುಂಬಯಿ ಉಚ್ಛ ನ್ಯಾಯಲಯವು ಮುಷ್ಕರದ ಹೆಸರಿನಲ್ಲಿ ಅಗತ್ಯ ಸೇವೆಗಳನ್ನು ನಿಲ್ಲಿಸಬಾರದು ಎಂದು ಎಚ್ಚರಿಸಿ ನಗರಲ್ಲಿ ಮುಷ್ಕರವನ್ನೇ ನಿಷೇಧಿಸಿಬಿಟ್ಟಿದೆ. ಮನವಿಗಳಿಗೆ ಕಿವುಡಾಗಿರುವ ಸರಕಾರವನ್ನು ಹೇಗೆ ಮಾತಾಡಿಸುವುದು ? ಅದಕ್ಕೆ ಅಲ್ಲಿನ ಮಹಾನಗರ ಪಾಲಿಕೆ ನೌಕರರು ಹೊಸ ಮಾರ್ಗ ಕಂಡು ಹಿಡಿದಿದ್ದಾರೆ.ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಂಬಯಿ ಮಹಾನಗರ ಪಾಲಿಕೆಯ ನೌಕರರು ಗಣೇಶ ಚತುರ್ಥಿ ಹಬ್ಬದಿಂದ 10 ದಿನಗಳವರೆಗೆ ತಮ್ಮ ಸೇವೆಗಳಿಗೆ ಪ್ರತಿಯಾಗಿ ಯಾವುದೇ ಶುಲ್ಕ ವಸೂಲಿ ಮಾಡುವುದಿಲ್ಲ . ಸಾರ್ವಜನಿಕರಿಗೆ ಎಲ್ಲವೂ ಬಿಟ್ಟಿ. ಈ ಮೂಲಕ ಅತ್ತ ಸರಕಾರದ ಬೊಕ್ಕಸಕ್ಕೆ ಏಟು, ಇತ್ತ ಪ್ರಯಾಣಿಕರಿಗೆ ಮತ್ತು ಬಳಕೆದಾರರಿಗೆ ಗಣೇಶ ಹಬ್ಬದ ಗಿಫ್ಟ್, ಜೊತೆಗೆ ನಿಯತ್ತಾಗಿ ಕೋರ್ಟ್ ಆದೇಶ ಪಾಲನೆ- ಮೂರು ಕೆಲಸವನ್ನು ಏಕಕಾಲಕ್ಕೆ ಮಾಡಲಿದ್ದಾರೆ.
ಆಗಸ್ಟ್ 22ರಿಂದ 10 ದಿನಗಳವರೆಗೆ ಮುಂಬಯಿ ಮಹಾನಗರ ಪಾಲಿಕೆ ನೌಕರರು ಸರಕಾರಕ್ಕೆ ಆದಾಯ ತರುವ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಿದ್ದಾರೆ. ಈ ಪ್ರಕಾರ, ಬಸ್ನಲ್ಲಿ ಟಿಕೇಟು ನೀಡುವುದಿಲ್ಲ , ಆಸ್ಪತ್ರೆಯಲ್ಲಿ ರೋಗಿಗಳಿಗೆ ವೈದ್ಯಕೀಯ ಶುಲ್ಕ ವಿಧಿಸುವುದಿಲ್ಲ, ಆಸ್ತಿ ಹಾಗೂ ನೀರಿನ ತೆರಿಗೆಯನ್ನೂ ವಿಧಿಸುವುದಿಲ್ಲ ಎಂದು ಅಲ್ಲಿನ ಕಾರ್ಮಿಕ ಮುಖಂಡ ಶರದ್ ರಾವ್ ಹೇಳಿದ್ದಾರೆ.
ಈ ಹೊಸ ನಮೂನೆಯ ಪ್ರತಿಭಟನೆಯಿಂದ ರಾಜ್ಯ ಸರಕಾರಕ್ಕೆ ಪ್ರತಿದಿನ 80 ಕೋಟಿ ರೂಪಾಯಿ ನಷ್ಟವಾಗಲಿದೆ. ಆಗಸ್ಟ್ 22ರೊಳಗೆ ಮಹಾನಗರ ಪಾಲಿಕೆ ನೌಕರರಿಗೆ ಬರಬೇಕಾದ ಎಕ್ಸ್ಗ್ರೇಷಿಯಾ ವೇತನವನ್ನು ನೀಡುವ ಬಗ್ಗೆ ಸರಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದಲ್ಲಿ ರೈಲ್ವೇ ನೌಕರರೂ ಈ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications