ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನ್ಯಾ. ರೆಡ್ಡಿ, ಭಾನ್ ಪ್ರಮಾಣ ವಚನ
ನವದೆಹಲಿ : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಧೀಶರಾಗಿದ್ದ ನ್ಯಾಯಮೂರ್ತಿ ಪಿ.ವೆಂಕಟರಾಮ ರೆಡ್ಡಿ ಹಾಗೂ ಹಿರಿಯ ನ್ಯಾಯಾಧಿಶರಾಗಿದ್ದ ನ್ಯಾ. ಅಶೋಕ್ ಭಾನ್ ಅವರು ಶುಕ್ರವಾರ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಈ ಇಬ್ಬರು ಹಿರಿಯ ನ್ಯಾಯಾಧೀಶರಿಗೆ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧಿಶರಾದ ಎ.ಎಸ್. ಆನಂದ್ ಪ್ರತಿಜ್ಞಾವಿಧಿ ಭೋದಿಸಿದರು. ಈ ಸಮಾರಂಭದಲ್ಲಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ, ನ್ಯಾಯಾಧೀಶರು ಹಾಗೂ ಹಿರಿಯ ವಕೀಲರು ಭಾಗವಹಿಸಿದ್ದರು.
ಈ ಇಬ್ಬರು ನ್ಯಾಯಾಧೀಶರ ಪ್ರಮಾಣ ವಚನದೊಂದಿಗೆ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರ ಸಂಖ್ಯೆ 26ಕ್ಕೆ ಏರಿದೆ. ಮತ್ತು ಸಂಪೂರ್ಣ ಸಾಮರ್ಥ್ಯವನ್ನು ಗಳಿಸಿಕೊಂಡಿದೆ.
(ಪಿ.ಟಿ.ಐ)
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Friday, August 17, 2001, 0:00 [IST]