Get Updates
Get notified of breaking news, exclusive insights, and must-see stories!

ಮಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲೂ ಐ.ಟಿ. ಕೇಂದ್ರ: ಕೃಷ್ಣ

ಬೆಂಗಳೂರು : ಅರಮನೆಗಳ ನಗರಿ ಮೈಸೂರು, ಅವಳಿ ನಗರ ಹುಬ್ಬಳ್ಳಿ - ಧಾರವಾಡ ಹಾಗೂ ಬಂದರು ನಗರಿ ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಹೆಚ್ಚಿನ ಗಮನ ಹರಿಸಲಿದೆ ಎಂದು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಪ್ರಕಟಿಸಿದ್ದಾರೆ.

ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಿಸಲುದ್ದೇಶಿಸಿರುವ ದಿವ್ಯಶ್ರೀ ಟವರ್ಸ್‌ನ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದ ಅವರು, ಹುಬ್ಬಳ್ಳಿಗೆ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಲು ಇನ್‌ಫೋಸಿಸ್‌ ಉದ್ದೇಶಿಸಿದೆ. ಕೇವಲ ಬೆಂಗಳೂರಷ್ಟೇ ಅಲ್ಲದೆ ರಾಜ್ಯದ ಇತರ ನಗರಗಳಿಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರ ವಿಸ್ತರಿಸುವ ಉದ್ದೇಶ ತಮ್ಮದಾಗಿದೆ ಎಂದರು.

ಸರಕಾರ ಹಾಗೂ ನಗರ ಪಾಲಿಕೆಗಳು ಮಾಹಿತಿ ತಂತ್ರಜ್ಞಾನದ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಖಾಸಗಿಯವರ ಸಹಭಾಗಿತ್ವ ಸೂಕ್ತ ಹಾಗೂ ನಿರೀಕ್ಷಿತ ಪ್ರಮಾಣದಲ್ಲಿ ದೊರಕದೇ ಹೋದರೆ ಗುರಿಸಾಧನೆಯಲ್ಲಿ ಅಡ್ಡಿ ಆತಂಕಗಳು ಬರುತ್ತವೆ ಎಂದು ಅವರು ಕೇವಲ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಎಲ್ಲ ನಗರಗಳ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಲಾಗುವುದೆಂದರು.

ಸಮಾರಂಭದಲ್ಲಿ ಯೋಜನಾ ಫಲಕ ಅನಾವರಣಗೊಳಿಸದ ಬೃಹತ್‌ ಕೈಗಾರಿಕಾ ಸಚಿವ ಆರ್‌.ವಿ. ದೇಶಪಾಂಡೆ ಅವರು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನೂತನ ಕೈಗಾರಿಕಾ ನೀತಿಯಡಿಯಲ್ಲಿ ಹೆಚ್ಚಿನ ಆದ್ಯತೆ ನೀಡುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕರಾದ ರಾಮಲಿಂಗಾರೆಡ್ಡಿ, ಮೇಯರ್‌ ಪ್ರೇಮಾ ಕಾರ್ಯಪ್ಪ, ಶ್ಯಾಮರಾಜ್‌ ಮತ್ತಿತರರು ಪಾಲ್ಗೊಂಡಿದ್ದರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+