ನಂಜನಗೂಡಿನ ಸುಗಂಧ ದ್ರವ್ಯತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ
ನಂಜನಗೂಡು : ಇಲ್ಲಿನ ಕೈಗಾರಿಕಾ ಬಡಾವಣೆಯ ಸುಗಂಧ ದ್ರವ್ಯ ತಯಾರಿಕೆಯ ‘ಸೂಪರ್ಫೈನ್ ಆರೋಮ್ಯಾಟಿಕ್ ಪ್ರೆೃವೇಟ್ ಲಿ.ಕಾರ್ಖಾನೆ’ಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿರುವ ಸ್ಫೋಟದಲ್ಲಿ ಮೂವರು ಗಾಯಗೊಂಡಿದ್ದು , 30 ಲಕ್ಷ ರುಪಾಯಿ ಬೆಲೆ ಬೆಳುವ ಆಸ್ತಿ ಬೆಂಕಿಗೆ ಆಹುತಿಯಾಗಿದೆ.
ಕಾರ್ಖಾನೆಯ ಹಿರಿಯ ವ್ಯವಸ್ಥಾಪಕ ಜಯಂತ್, ಇಂಜಿನಿಯರ್ ಅಂಬುಗೇಶ್ ಹಾಗೂ ಆಪರೇಟರ್ ರಂಗಸ್ವಾಮಿ ಸ್ಫೋಟದಲ್ಲಿ ಗಾಯಗೊಂಡಿದ್ದಾರೆ. ಸ್ಫೋಟದ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ ನೌಕರರು ಇಲ್ಲದ್ದರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ . ರಾಸಾಯನಿಕ ಮಿಶ್ರಿತ ಡಬ್ಬದಲ್ಲಿ ಹೊಗೆಯಾಡುತ್ತಿದ್ದುದನ್ನು ಗಮನಿಸಿದ ರಂಗಸ್ವಾಮಿ, ಶಾಖವನ್ನು ಶಮನಗೊಳಿಸುವ ಪರಿಕರಗಳನ್ನು ತರಲು ಘಟಕದಿಂದ ಹೊರಹೋಗಿ ಹಿಂತಿರುಗುವಷ್ಟರಲ್ಲಿ ಸ್ಫೋಟ ಸಂಭವಿಸಿದೆ.
ಘಟನೆಯ ಭೀಕರ ಶಬ್ದ ಪಟ್ಟಣದ ಬಹುಭಾಗದವರೆಗೆ ಕೇಳಿಸಿದ್ದು , ಇದು ಭೂಕಂಪವಿರಬಹುದೆಂದು ನಾಗರಿಕರು ತಲ್ಲಣಗೊಂಡಿದ್ದರು. ಸುಗಂಧದ್ರವ್ಯ ತಯಾರಿಕೆಯಲ್ಲಿ ಬಳಸುವ ಪರಾಸಿಡಿಕ್ ಆ್ಯಸಿಡ್ ಹಾಗೂ ಹೈಡ್ರೋಜನ್ ಪರಾಕ್ಸೈಡ್ ಮಿಶ್ರಣದ ಪ್ಲಾಸ್ಟಿಕ್ ಡಬ್ಬ ಸಿಡಿದು ಈ ಸ್ಫೋಟ ಸಂಭವಿಸಿದೆ ಎಂದು ಕಾರ್ಖಾನೆಯ ಮೂಲಗಳು ತಿಳಿಸಿವೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications