ಜಾಗತಿಕ ಶಸ್ತ್ರಾಸ್ತ್ರಗಳ ಮಾರುಕಟ್ಟೆಯ ಗ್ರಾಹಕರಲ್ಲಿ ಭಾರತ ನಂ.2
ವಾಷಿಂಗ್ಟನ್ : ಶಸ್ತ್ರಾಸ್ತ್ರಗಳನ್ನು ಕೊಳ್ಳುವಲ್ಲಿ ಭಾರತ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು American Congressional ವರದಿ ತಿಳಿಸಿದೆ. ಅಗ್ರಸ್ಥಾನ ಯುನೈಟೆಡ್ ಅರಬ್ ಎಮಿರೇಟ್ಸ್ ಪಾಲಿಗೆ.
ಮೊದಲನೇ ಸ್ಥಾನದಲ್ಲಿರುವ ಯುನೈಟೆಡ್ ಅರಬ್ ಎಮಿರೇಟ್ಸ್ 18.6 ಬಿಲಿಯನ್ ಡಾಲರ್ಗಳನ್ನು ಶಸ್ತ್ರಾಸ್ತ್ರ ಖರೀದಿಗೆ ಖರ್ಚು ಮಾಡಿದರೆ, ಕಳೆದ ವರ್ಷ 4.8 ಬಿಲಿಯನ್ ಡಾಲರ್ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಖರೀದಿಸುವ ಒಪ್ಪಂದಕ್ಕೆ ಭಾರತ ಸಹಿ ಹಾಕಿದೆ ಎಂದು ವರದಿ ತಿಳಿಸಿದೆ. ಈಗ ಹೇಳಿ ಭಾರತ ಬಡರಾಷ್ಟ್ರವಾ?
ರಿಚರ್ಡ್ ಎಫ್ ಗ್ರಿಮ್ಮೆಟ್ ಎನ್ನುವ ನ್ಯಾಶನಲ್ ಡಿಫೆನ್ಸ್ನ ತಜ್ಞನೊಬ್ಬ ಈ ವರದಿಯನ್ನು ತಯಾರಿಸಿದ್ದು , ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಶಸ್ತ್ರಾಸ್ತ್ರಗಳನ್ನು ಮಾರುವ ಪ್ರಮಾಣ ಕಳೆದ ವರ್ಷ ಪ್ರತಿಶತ 8 ರಷ್ಟು , ಅಂದರೆ 36.9 ಬಿಲಿಯನ್ ಡಾಲರ್ಗಳಷ್ಟು ಹೆಚ್ಚಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಶೀತಲಯುದ್ಧ ಕೊನೆಗೊಂಡ ನಂತರ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಆಯುಧ ಮಾರಾಟ ಕೇಂದ್ರಗಳಾಗಿದ್ದು , ಅಭಿವೃದ್ಧಿ ಶೀಲ ರಾಷ್ಟ್ರಗಳು ಪ್ರಮುಖ ಗಿರಾಕಿಗಳಾಗಿವೆ. ಆಯುಧ ಮಾರಾಟಗಾರರಲ್ಲಿ ಎಂದಿನಂತೆ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ, 7.7 ಬಿಲಿಯನ್ ಡಾಲರ್ ಮಾರಾಟ ವ್ಯಾಪ್ತಿಯನ್ನು ಹೊಂದಿರುವ ರಷ್ಯಾ 2 ನೇ ಸ್ಥಾನದಲ್ಲಿ , 4.1 ಬಿ.ಡಾಲರ್ಗಳ ವ್ಯಾಪ್ತಿಯ ಫ್ರಾನ್ಸ್ ಮೂರನೇ ಸ್ಥಾನದಲ್ಲಿವೆ. ಜರ್ಮನಿ, ಬ್ರಿಟನ್, ಚೀನಾ ಕೂಡ ಶಸ್ತ್ರಾಸ್ತ್ರ ಮಾರಾಟದಲ್ಲಿ ಹಿಂದೆ ಬಿದ್ದಿಲ್ಲ .
(ಪಿಟಿಐ)
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications