ಬರ ಪರಿಹಾರ ವೀಕ್ಷಣೆ : ರಾಯಚೂರು ಜಿಲ್ಲೆ ಗ್ರಾಮಗಳಲ್ಲಿ ಎಸ್.ಎಂ.ಕೃಷ್ಣ
ರಾಯಚೂರು : ಜಿಲ್ಲೆಯ ಯರಗೇರಾ, ತಮ್ಟಾಪುರ, ಲಿಂಗನಕಾನದೊಡ್ಡಿ, ಜಬಲದಿನ್ನಿ ಗಣಮೂರು ಮತ್ತಿತರ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬರ ಪರಿಹಾರ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿದರು.
ಸರ್ಕಾರ ನೀಡುತ್ತಿರುವ ಪರಿಹಾರ ಸರಿಯಾಗಿ ದೊರೆಯುತ್ತಿದೆಯೆ, ಕೂಲಿ ಸಿಗುತ್ತಿದೆಯೇ ಎನ್ನುವುದನ್ನು ಸ್ವತಃ ಕೂಲಿ ಕಾರ್ಮಿಕರನ್ನು ಮಾತನಾಡಿಸುವ ಮೂಲಕ ಮುಖ್ಯಮಂತ್ರಿಗಳು ಖಚಿತಪಡಿಸಿಕೊಂಡರು. ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕೆರೆಗಳ ಹೂಳು ತೆಗೆಯುವ ಕಾಮಗಾರಿಗಳನ್ನೂ ಅವರು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ , ಪರಿಹಾರ ಕಾಮಗಾರಿಗಳನ್ನು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿ ಜಿ.ಕುಮಾರನಾಯಕ್ ವಿವರಿಸಿದರು. ಸರ್ಕಾರ ನಿಗದಿಪಡಿಸಿರುವಂತೆ 45.25 ರುಪಾಯಿಗಳ ಕೂಲಿಯನ್ನು ಕಾರ್ಮಿಕರಿಗೆ ನೀಡಲಾಗುತ್ತಿದೆ. ಸುಮಾರು 3 ಸಾವಿರ ಕೂಲಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಧರ್ಮಸಿಂಗ್, ಪೌರಾಡಳಿತ ರಾಜ್ಯ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಶಾಸಕ ಸೈಯದ್ ಯಾಸೀನ್, ಸಂಸದ ವೆಂಕಟೇಶ ನಾಯಕ್, ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಎನ್.ಎಸ್.ಬೋಸರಾಜ್ ಮತ್ತಿತರರು ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ಹಾಜರಿದ್ದರು.
ಯರಗೇರಾ ಗ್ರಾಮದಲ್ಲಿ ಮುಖ್ಯಮಂತ್ರಿಗಳಿಗೆ ಘೕರಾವ್
ಬರ ಪರಿಹಾರ ಕಾಮಗಾರಿಗಳನ್ನು ವೀಕ್ಷಿಸಲು ರಾಯಚೂರು ತಾಲ್ಲೂಕಿನ ಯರಗೇರಾ ಗ್ರಾಮಕ್ಕೆ ಮುಖ್ಯಮಂತ್ರಿ ಕೃಷ್ಣ ಅವರು ಆಗಮಿಸಿದಾಗ, ಉದ್ರಿಕ್ತ ರೈತರು ಹಾಗೂ ಗ್ರಾಮಸ್ಥರು ಘೕರಾವ್ ಮಾಡಿರುವ ಘಟನೆ ವರದಿಯಾಗಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications