ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಜೈನ್
ನವದೆಹಲಿ : ನ್ಯಾಯಮೂರ್ತಿ ನಾಗೇಂದ್ರ ಕುಮಾರ್ ಜೈನ್ ಅವರನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಮದ್ರಾಸ್ ಹೈಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ನ್ಯಾಯಮೂರ್ತಿ ಎನ್.ಕೆ. ಜೈನ್ ಅವರನ್ನು ಬೆಂಗಳೂರಿನಲ್ಲಿರುವ ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಪಿ. ವೆಂಕಟರಾಮ ರೆಡ್ಡಿ ಅವರು ಸರ್ವೋನ್ನತ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಉಚ್ಚ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಾಧೀಶರ ಹುದ್ದೆ ತೆರವಾಗಿತ್ತು.
(ಪಿ.ಟಿ.ಐ /ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Wednesday, August 22, 2001, 0:00 [IST]