ಸಾರಿ ಮೇಡಂ ಜಯಲಲಿತಾ! ಆ.25ರಂದು ಕಾವೇರಿ ಚರ್ಚೆ ಸಾಧ್ಯವಿಲ್ಲ !
ಬೆಂಗಳೂರು : ತಮಿಳುನಾಡಿನ ಕೋರಿಕೆಯ ಮೇರೆಗೆ ಕಾವೇರಿ ನೀರು ಬಿಡುಗಡೆ ಕುರಿತು ಚರ್ಚಿಸಲು ಶೀಘ್ರವೇ ದಿನಾಂಕವನ್ನು ರಾಜ್ಯ ಸರ್ಕಾರ ನಿಗದಿ ಪಡಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ ಎಚ್.ಕೆ.ಪಾಟೀಲ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಗರದಲ್ಲಿ ಇರುವುದನ್ನು ಗಮನಿಸಿಕೊಂಡು ಸಭೆಯ ದಿನಾಂಕವನ್ನು ನಿಗದಿಪಡಿಸಲಾಗುವುದು. ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಕೃಷ್ಣ ಅವರಿಗೆ ಬರೆದಿರುವ ಪತ್ರದಲ್ಲಿ - ತಮ್ಮ ರಾಜ್ಯದ ನೀರಾವರಿ ಸಚಿವರು ಹಾಗೂ ನೀರಾವರಿ ಇಲಾಖೆಯ ಕಾರ್ಯದರ್ಶಿಗಳು ಆಗಸ್ಟ್ 25 ಅಥವಾ 26 ರಂದು ಭೇಟಿಯಾಗಲು ಇಚ್ಛಿಸಿರುವುದಾಗಿ ತಿಳಿಸಿದ್ದರು ಎಂದು ಬರೆದಿರುವುದಾಗಿ ಪಾಟೀಲ್ ಹೇಳಿದರು.
ಆಗಸ್ಟ್ 25 ರಂದು, ಸಹಕಾರಿ ನೀತಿಗೆ ತಿದ್ದುಪಡಿ ತರುವ ಕುರಿತು ಪ್ರಧಾನಿ ವಾಜಪೇಯಿ ಕರೆದಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ ಕೃಷ್ಣ ಭಾಗವಹಿಸುತ್ತಿದ್ದಾರೆ. ತಾವು ಕೂಡ ಆಗಸ್ಟ್ 25 ರ ಶನಿವಾರ ಬರ ಪರಿಹಾರ ಕಾಮಗಾರಿಗಳ ಸಮೀಕ್ಷೆ ನಡೆಸಲು ಹುಬ್ಬಳ್ಳಿಗೆ ತೆರಳುತ್ತಿರುವ ಕಾರಣ, ಜಯಲಲಿತಾ ಸೂಚಿಸಿರುವ ದಿನಾಂಕಗಳನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ . ಕೃಷ್ಣ ಅವರು ದೆಹಲಿಯಿಂದ ವಾಪಸ್ಸಾದ ನಂತರ ಸೂಕ್ತ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಪಾಟೀಲ್ ತಿಳಿಸಿದರು.
ಬರ ಪರಿಸ್ಥಿತಿಯಿದ್ದರೂ ಮೆಟ್ಟೂರು ಜಲಾಶಯಕ್ಕೆ ಬಿಡುಗಡೆ ಮಾಡಲು ಕರ್ನಾಟಕದ ಬಳಿ ಸಾಕಷ್ಟು ನೀರಿದೆ ಎನ್ನುವ ಜಯಲಲಿತಾ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಲು ಪಾಟೀಲ್ ನಿರಾಕರಿಸಿದರು.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications