ಮತ್ತೆಂಟು ಹೊಸ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಸಂಪುಟ ಸಮ್ಮತಿ
ಬೆಂಗಳೂರು : ಮಾಹಿತಿ ತಂತ್ರಜ್ಞಾನದ ನಾಲ್ಕು ಪ್ರಮುಖ ಕೋರ್ಸ್ಗಳಿಗೆ ತಲಾ 60 ಸೀಟಿನಂತೆ ಒಟ್ಟು 240 ಸೀಟುಗಳುಳ್ಳ ಎಂಟು ಹೊಸ ಎಂಜಿನಿಯರಿಂಗ್ ಕಾಲೇಜುಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮತಿ ನೀಡಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎ.ಐ.ಸಿ.ಟಿ.ಇ) ಅನುಮತಿ ಪಡೆದು ಈ ಕಾಲೇಜುಗಳು ಪ್ರಾರಂಭವಾಗಲಿವೆ.
ಹೊಸ ಎಂಟು ಕಾಲೇಜುಗಳ ಜೊತೆಗೆ ಹಾಲಿ ಇರುವ ಆರು ಕಾಲೇಜುಗಳಲ್ಲಿ 435 ಸೀಟುಗಳನ್ನು ಹೆಚ್ಚಿಸಲೂ ಸಮ್ಮತಿಸಲಾಗಿದೆ. ಹೊಸ ಕಾಲೇಜುಗಳ ಆರಂಭದಿಂದ ಒಟ್ಟಾರೆಯಾಗಿ 1920 ಸೀಟುಗಳು ಹೆಚ್ಚುವರಿಯಾಗಿ ಲಭ್ಯವಾಗಲಿವೆ.
ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡ ಈ ನಿರ್ಧಾರವನ್ನು ಸಮಾಜ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ ಅವರು, ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಕೃಷ್ಣ ನೇತೃತ್ವದ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತರುವಾಯ ಒಟ್ಟು 21 ಹೊಸ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ ಆಗಿದೆ. ಈಗ 8 ಹೊಸ ಕಾಲೇಜುಗಳಿಗೆ ನೀಡಿರುವ ಅನುಮತಿಯಿಂದಾಗಿ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆ 110ಕ್ಕೆ ಏರಲಿದೆ.
ಅನುಮತಿ ಪಡೆದ ಹೊಸ ಕಾಲೇಜುಗಳು : ಅಲ್ ಅಮೀನ್ ಎಜುಕೇಷನ್ ಟ್ರಸ್ಟ್, ಬೆಂಗಳೂರು; ಆಲ್ಫಾ ಎಜುಕೇಷನ್ ಟ್ರಸ್ಟ್, ಬೆಂಗಳೂರು; ನಿಟ್ಟೆ ಎಜುಕೇಷನ್ ಟ್ರಸ್ಟ್, ಮಂಗಳೂರು; ಆದಿ ಚುಂಚನಗಿರಿ ಎಜುಕೇಷನ್ ಟ್ರಸ್ಟ್, ನಾಗಮಂಗಲ; ವಿಶ್ವೇಶ್ವರಯ್ಯ ಎಜುಕೇಷನ್ ಟ್ರಸ್ಟ್, ಬೆಂಗಳೂರು; ಅಭ್ಯುದಯ ಶಿಕ್ಷಣ ಸಂಸ್ಥೆ ಮತ್ತು ಪೀಪಲ್ಸ್ ಎಜುಕೇಷನ್ ಟ್ರಸ್ಟ್, ಬೆಂಗಳೂರು.
ಹೆಚ್ಚುವರಿ ಸೀಟು ಪಡೆದ ಕಾಲೇಜುಗಳು : ಸಿದ್ಧಾರ್ಥ ಕಾಲೇಜು - ತುಮಕೂರು, ಬೇಲಿಮಠ ತಾಂತ್ರಿಕ ಕಾಲೇಜು - ನೆಲಮಂಗಲ, ಅಂಬೇಡ್ಕರ್ ತಾಂತ್ರಿಕ ಕಾಲೇಜು, ನಾಗರಬಾವಿ - ಬೆಂಗಳೂರು, ಆಚಾರ್ಯ ತಾಂತ್ರಿಕ ಶಿಕ್ಷಣ ಸಂಸ್ಥೆ - ಬೆಂಗಳೂರು, ಎಚ್.ಎಂ.ಎಸ್. ತಾಂತ್ರಿಕ ಕಾಲೇಜು.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications