ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೃಂಗೇರಿಯ ಗತ ವೈಭವ ಪ್ರತಿಬಿಂಬಿಸುವ ಛಾಯಾಚಿತ್ರ ಪ್ರದರ್ಶನ

By Staff
|
Google Oneindia Kannada News

ಬೆಂಗಳೂರು : ಆಚಾರ್ಯ ತ್ರಯರಲ್ಲಿ ಒಬ್ಬರಾದ ಆದಿ ಶಂಕರಾಚಾರ್ಯರು ಮಲೆನಾಡ ಮಡಿಲಲ್ಲಿ ಸ್ಥಾಪಿಸಿರುವ ಶಾರದಾಪೀಠದ ಮಹಿಮೆ ಮತ್ತು ತಾತ್ವಿಕ ಚಿಂತನೆಯನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಆ.25ರಿಂದ 31ರವರೆಗೆ ಬೆಂಗಳೂರಿನ ಚಿತ್ರ ಕಲಾ ಗ್ಯಾಲರಿಯಲ್ಲಿ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.

ಶೃಂಗೇರಿಯ ಗತವೈಭವ, ಸನಾತನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಅಪರೂಪದ ಛಾಯಾಚಿತ್ರಗಳನ್ನು ಇಲ್ಲಿ ಪ್ರದರ್ಶಿಸಲಾಗುವುದು. ಶೃಂಗೇರಿ ಶಾರದಾಪೀಠದ ಇತಿಹಾಸ, ಶ್ರೀಕ್ಷೇತ್ರದಲ್ಲಿನ ಪ್ರಮುಖ ಕಾರ್ಯಕ್ರಮ, ಘಟನಾವಳಿಗಳ ಚಿತ್ರಗಳೂ ಇಲ್ಲಿ ಪ್ರದರ್ಶನಗೊಳ್ಳಲಿವೆ.

ಪ್ರಶಾಂತ್‌ ಶೃಂಗೇರಿ ಅವರ ಈ ಚಿತ್ರ ಪ್ರದರ್ಶನವನ್ನು ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ಚಿತ್ರ ಕಲಾ ಗ್ಯಾಲರಿಯಲ್ಲಿ ಶಾರದಾಪೀಠದ ಆಡಳಿತಾಧಿಕಾರಿ ವಿ.ಆರ್‌. ಗೌರಿ ಶಂಕರ್‌ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಸರಾಂತ ಛಾಯಾಗ್ರಾಹಕ ಸಿ. ರಾಜಗೋಪಾಲ್‌, ನ್ಯಾಯಮೂರ್ತಿ ನಿಟ್ಟೂರು ಶ್ರೀನಿವಾಸ ರಾವ್‌ ಮತ್ತಿತರರು ಪಾಲ್ಗೊಳ್ಳುತ್ತಿದ್ದಾರೆ.

ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X