ವಿಶ್ವೇಶ್ವರಯ್ಯ ನಾಲೆಯಲ್ಲಿ ಬಿರುಕು: ತನಿಖೆಗೆ ಇಬ್ಬರು ತಜ್ಞರ ಸಮಿತಿ
ಬೆಂಗಳೂರು : ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾರ್ಯದಲ್ಲಿ ಇತ್ತೀಚೆಗೆ ಉಂಟಾಗಿರುವ ಭಾರೀ ಬಿರುಕಿನ ಕುರಿತು ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಇಬ್ಬರು ತಜ್ಞರ ಸಮಿತಿಯನ್ನು ನೇಮಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಎಚ್.ಕೆ.ಪಾಟೀಲ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ಬಿರುಕನ್ನು ತಡೆಗಟ್ಟುವಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ನೀರಾವರಿ ಇಲಾಖೆಯ ಇಂಜಿನಿಯರ್ಗಳು ವಿಫಲವಾಗಿರುವ ಕುರಿತು ಗುರುವಾರ ಸ್ಥಳಕ್ಕೆ ಭೇಟಿ ಕೊಟ್ಟಾಗ ಸ್ಥಳೀಯರು ದೂರುಗಳನ್ನು ಸಲ್ಲಿಸಿದರು ಎಂದು ಪಾಟೀಲ್ ಹೇಳಿದರು. ರೈತರ ಎಚ್ಚರಿಕೆಗಳನ್ನು ಕಡೆಗಣಿಸಿರುವ ಇಂಜಿನಿಯರ್ಗಳ ನಿರ್ಲಕ್ಷ್ಯದಿಂದಾಗಿ ಕನಿಷ್ಠ 20 ಕೋಟಿ ರುಪಾಯಿ ನಷ್ಟವನ್ನು ರೈತರು ಅನುಭವಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಹಾಗೂ ಒಬ್ಬ ಜೂನಿಯರ್ ಇಂಜಿನಿಯರ್ ಅವರನ್ನು ಕರ್ತವ್ಯಲೋಪದ ಮೇರೆಗೆ ಸಸ್ಪೆಂಡ್ ಮಾಡಲಾಗಿದೆ ಎಂದರು.
20 ದಿನಗಳೊಳಗಾಗಿ ಸಮಿತಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಇನ್ನು ಹದಿನೈದು ದಿನಗಳಲ್ಲಿ ಸಂತ್ರಸ್ತ ರೈತರಿಗೆ ಪರಿಹಾರ ಒದಗಿಸುತ್ತಿದ್ದು , ಮಂಡ್ಯ ಉಪ ಜಿಲ್ಲಾಧಿಕಾರಿಗಳು ಈ ಕಾರ್ಯದ ನೇತೃತ್ವ ವಹಿಸುತ್ತಾರೆ ಎಂದು ಪಾಟೀಲ್ ಹೇಳಿದರು.
ಹರಿನಾಲಾ ಹಾಗೂ ಮಾರ್ಕಂಡೇಯ ನೀರಾವರಿ ಯೋಜನೆಗಳಿಂದ ನೆಲೆ ಕಳೆದುಕೊಂಡ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಪ್ರಸ್ತಾವನೆ ಮುಂದಿನ ಸಂಪುಟ ಸಭೆಯ ಎದುರು ಬರಲಿದೆ. ನವಂಬರ್ ವೇಳೆಗೆ ಮಾರ್ಕಂಡೇಯ ಅಣೆಕಟ್ಟೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಪಾಟೀಲ್ ಹೇಳಿದರು.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications