ಹೆಗಡೆ-75: ಕಾರ್ಯಕ್ರಮಕ್ಕೆ ಕೃಷ್ಣ ಸೇರಿದಂತೆ ರಾಜಕಾರಣಿಗಳ ಹಿಂಡು
ಬೆಂಗಳೂರು : ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ 75 ನೇ ಹುಟ್ಟುಹಬ್ಬ ಆಚರಣೆ (ಆ.29)ಯ ವೇದಿಕೆ ಸಿದ್ಧವಾಗಿದ್ದು, ಕಾರ್ಯಕ್ರಮಕ್ಕೆ ಆಗಮಿಸಲು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ , ಮಾಜಿ ಪ್ರಧಾನಿ ಚಂದ್ರಶೇಖರ್, ಕೇಂದ್ರ ಸಚಿವರಾದ ವೆಂಕಯ್ಯನಾಯ್ಡು ಮತ್ತು ಸುಷ್ಮಾ ಸ್ವರಾಜ್, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಫರೂಕ್ ಅಬ್ದುಲ್ಲಾ ಹಾಗೂ ಎನ್ಸಿಪಿ ನಾಯಕ ಶರದ್ ಪವಾರ್ ಸಮ್ಮತಿಸಿದ್ದಾರೆ.
ಹೆಗಡೆಯವರ ಒಂದಾನೊಂದು ಕಾಲದ ಸಂಗಾತಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ . ಎನ್ಡಿಎ ಸಂಚಾಲಕ ಜಾರ್ಜ್ ಫರ್ನಾಂಡಿಸ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಹುಟ್ಟುಹಬ್ಬದ ಸಂಘಟಕರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರಗಳನ್ನು ನೀಡಿದರು.
ಡಯಾಲಿಸಿಸ್ಗೆ ಒಳಗಾಗುತ್ತಿರುವ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರು ವೈದ್ಯರು ಅವಕಾಶ ಮಾಡಿಕೊಟ್ಟಲ್ಲಿ ಹೆಗಡೆಯವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಫರ್ನಾಂಡಿಸ್ ಅವರಿಗೆ ಆಹ್ವಾನ ಕಳಿಸದಿರುವ ಬಗ್ಗೆ ಯಾವುದೇ ಕಾರಣ ನೀಡಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಯುಕ್ತ ಜನತಾದಳದ ಪ್ರಧಾನ ಕಾರ್ಯದರ್ಶಿ ಬಸವರಾಜ ರಾಯರೆಡ್ಡಿ ನಿರಾಕರಿಸಿದರು. ವಾಜಪೇಯಿ ಸಂಪುಟದಲ್ಲಿ ಹೆಗಡೆ ಸ್ಥಾನ ವಂಚಿತರಾಗಲು ಜಾರ್ಜ್ ಕಾರಣ ಎನ್ನುವ ಹಳೆಯ ಜಗಳ ಆಹ್ವಾನ ಪತ್ರ ಕಳಿಸದಿರಲು ಕಾರಣವೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ರಾಯರೆಡ್ಡಿ ಉತ್ತರಿಸಲಿಲ್ಲ .
ಹೆಗಡೆಯವರ ಹಳೆಯ ಸ್ನೇಹಿತರನ್ನು ಕಲೆಹಾಕುವ ವೇದಿಕೆಯನ್ನು ನಾವು ರೂಪಿಸುತ್ತಿದ್ದೇವೆ. ಈ ಪ್ರಯತ್ನದಲ್ಲಿ ಯಾವುದೇ ರಾಜಕಾರಣವಿಲ್ಲ . ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರೂ ಭಾಗವಹಿಸುತ್ತಾರೆ ಎಂದು ರಾಯರೆಡ್ಡಿ ಹೇಳಿದರು.
(ಪಿಟಿಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications