ತುಂಗಾಮೂಲ ಉಳಿಸಿ ಆಂದೋಲನಕ್ಕೆ ಶೃಂಗೇರಿ ಸ್ವಾಮೀಜಿ ಬೆಂಬಲ
ಶಿವಮೊಗ್ಗ : ಕುದುರೆಮುಖ ಗಣಿಗಾರಿಕೆ ವಿರೋಧೀ ಆಂದೋಲನಕ್ಕೆ ಮತ್ತಷ್ಟು ಗಣ್ಯರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಪರಿಸರ ಚಿಂತಕ ಡಾ. ನಿ. ಮುರಾರಿ ಬಲ್ಲಾಳ್ ಅವರು ಕೆಐಓಸಿಎಲ್ ಕಂಪೆನಿ ಒಂದು ಕ್ಷಣವೂ ಮುಂದುವರೆಯಬಾರದು ಎಂದು ಹೇಳಿದ್ದರೆ, ಪರಿಸರ ರಕ್ಷಣೆಗಾಗಿ ಶೃಂಗೇರಿಮಠವು ಎಲ್ಲ ರೀತಿಯಿಂದಲೂ ಸಹಾಯ ಮಾಡುವುದು ಎಂದು ಶೃಂಗೇರಿ ಶಂಕರ ಮಠದ ಭಾರತೀ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ತುಂಗಾ ಮೂಲ ಉಳಿಸಿ ಚಳವಳಿಗೆ ಬೆಂಬಲ ವ್ಯಕ್ತಪಡಿಸಿರುವ ಸ್ವಾಮೀಜಿಗಳು ಯಾವುದೇ ಕಾರಣಕ್ಕೂ ಕುದುರೆಮುಖದಲ್ಲಿ ಗಣಿಗಾರಿಕೆ ಮುಂದುವೆರಿಸಲು ರಾಜ್ಯ ಸರಕಾರ ಅವಕಾಶ ನೀಡಬಾರದು ಎಂದು ಹೇಳಿರುವುದಾಗಿ ಸಾಹಿತಿ ಡಾ. ಯು. ಆರ್. ಅನಂತ ಮೂರ್ತಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಗಣಿಗಾರಿಕೆ ನಿಲ್ಲಿಸಲು ಸರಕಾರವನ್ನು ಆಗ್ರಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ನಿ. ಮುರಾರಿ ಬಲ್ಲಾಳ್ ಅವರ ಪ್ರಕಾರ, ಈಗ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 2,500 ಕಾರ್ಮಿಕರ ಭವಿಷ್ಯದ ಪ್ರಶ್ನೆಯ ನೆಪವೊಡ್ಡಿ ಸರಕಾರವು ಗಣಿಗಾರಿಕೆಗೆ ಪರವಾನಿಗೆ ಮುಂದುವರೆಸಲು ಹುನ್ನಾರ ನಡೆಸುತ್ತಿದೆ. ಮಾಹಿತಿ ತಂತ್ರಜ್ಞಾನದ ನೆಪದಿಂದ 2.4 ಲಕ್ಷ ಸಣ್ಣ ಕೈಗಾರಿಕೆಗಳು ಮುಚ್ಚಿವೆ. ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿವೆ. ಇವ್ಯಾವುದರ ಪರಿವೆ ಇಲ್ಲದ ಸರಕಾರ ಕೆಐಓಸಿಎಲ್ನ ಕಾರ್ಮಿಕರ ಭವಿಷ್ಯದ ಬಗ್ಗೆ ಅತೀವ ತಲೆ ಕೆಡಿಸಿಕೊಂಡು ಪರಿಸರ ರಕ್ಷಣೆಯ ಬಗೆಗೆ ಕಿಂಚಿತ್ತೂ ಆಸಕ್ತಿ ತೋರಿಸಿಲ್ಲ ಎಂದು ಹೇಳಿದ್ದಾರೆ.
ಜನರ ಹೋರಾಟವನ್ನು ನಿರ್ಲಕ್ಷಿಸಿ ಸ್ಥಳೀಯರ ಕ್ಷೇಮವನ್ನು ಸರಕಾರ ಮರೆತಿದೆ ಎಂದು ಸರಕಾರದ ಧೋರಣೆಯನ್ನು , ಕರಾವಳಿಯ ಲೇಖಕಿ ವೈದೇಹಿ ಟೀಕಿಸಿದ್ದಾರೆ. ಪರಿಸರನಾಶದತ್ತ ದಾಪುಗಾಲು ಇಡುತ್ತಿರುವ ಸರಕಾರಕ್ಕೆ ಪ್ರಕೃತಿಯನ್ನು ಬೇಕೆಂದಾಗಲೆಲ್ಲ ಸೃಷ್ಟಿಸುವುದು ಸಾಧ್ಯವಿಲ್ಲ ಎಂಬುದು ತಿಳಿದಿರಬೇಕು. ಗಣಿಗಾರಿಕೆಯನ್ನು ಬೇಗ ಮುಚ್ಚಿದಷ್ಟೂ ನಮಗೇ ಒಳಿತು ಎಂದಿದ್ದಾರೆ.
ಪರಿಸರವಾದಿಗಳ ಪರವಾಗಿ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ಸಿ) ತೀರ್ಪು ನೀಡಿರುವುದನ್ನು ಉಲ್ಲೇಖಿಸುತ್ತಾ ಪತ್ರಕರ್ತ, ಲೇಖಕ, ವರದೇಶ್ ಟಿ. ಹಿರೇಗಂಗೆ ಗಣಿಗಾರಿಕೆ ಮುಂದುವರಿಕೆಯನ್ನು ಖಂಡಿಸಿದ್ದಾರೆ. ಗಣಿಗಾರಿಕೆಯಾಂದನ್ನೇ ಮನಸ್ಸಿನಲ್ಲಿಟ್ಟುಕೊಂಡು ಮುಂದುವರೆಯುತ್ತಿರುವ ಸರಕಾರ ಕೃಷಿಯಿಂದಲೇ ಬದುಕು ಎಂಬುದನ್ನು ಸಂಪೂರ್ಣವಾಗಿ ಮರೆತಿದೆ ಎಂದು ಹಿರೇಗಂಗೆ ವಾದಿಸಿದ್ದಾರೆ.
ಕುದುರೆಮುಖ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರಿಗೆ ಪತ್ರ ಬರೆಯಲಾಗಿದ್ದು ತುಂಗಾ ಮೂಲ ಉಳಿಸಿ ಹೋರಾಟಕ್ಕೆ ರಂಭಾಪುರಿ ಪೀಠದ ಸ್ವಾಮೀಜಿಯವರ ಬೆಂಬಲವನ್ನೂ ಕೋರಲಾಗಿದೆ ಎಂದು ಅನಂತ ಮೂರ್ತಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications