ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆಗಡೆ ಜನ್ಮೋತ್ಸವ : ಭಾಜಪ ನಾಯಕರ ಗೈರು ಹಾಜರಿ

By Staff
|
Google Oneindia Kannada News

ಬೆಂಗಳೂರು : ಸಹಸ್ರಾರು ಮಂದಿ ಸಮ್ಮುಖದಲ್ಲಿ ಅರಮನೆ ಆವರಣದಲ್ಲಿ ಬುಧವಾರ ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ 75ನೇ ಹುಟ್ಟುಹಬ್ಬ ಅದ್ಧೂರಿಯಾಗಿ ನಡೆಯುತ್ತಿದೆ. ಭಾರತೀಯ ಜನತಾ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವರ ಗೈರು ಹಾಜರಿ ಸಮಾರಂಭದಲ್ಲಿ ಎದ್ದು ಕಾಣುತ್ತಿದೆ.

ಮಾಜಿ ಪ್ರಧಾನಿ ಚಂದ್ರಶೇಖರ್‌, ಕರ್ನಾಟಕದ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಜಮ್ಮು- ಕಾಶ್ಮೀರ ಮುಖ್ಯಮಂತ್ರಿ ಫರೂಕ್‌ ಅಬ್ದುಲ್ಲ, ಕೇಂದ್ರ ಸಚಿವರಾದ ಶರದ್‌ ಯಾದವ್‌, ಮನೇಕಾ ಗಾಂಧಿ, ಮಹಾರಾಷ್ಟ್ರದ ಶರದ್‌ ಪವಾರ್‌ ಹಾಗೂ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಸಮಾರಂಭದಲ್ಲಿ ಹಾಜರಿರುವ ಪ್ರಮುಖರು. ಜಾತ್ಯತೀತ ಜನತಾ ದಳದ ಶಾಸಕ ಕೆ.ಎಚ್‌.ಶ್ರೀನಿವಾಸ್‌ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಎದ್ದು ಕಾಣುತ್ತಿತ್ತು.

ಪ್ರಧಾನಿ ವಾಜಪೇಯಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಉಪ ರಾಷ್ಟ್ರಪತಿ ಕೃಷ್ಣಕಾಂತ್‌ ಹಾಗೂ ಪಶ್ಚಿಮ ಬಂಗಾಳದ ಜ್ಯೋತಿ ಬಸು ಹೆಗಡೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿ ಸಂದೇಶಗಳನ್ನು ಕಳುಹಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X