‘ಪಂಚವಾರ್ಷಿಕ ಯೋಜನೆ ಫಲವಾಗಿ ರಾಷ್ಟ್ರ ಸ್ವಾವಲಂಬನೆ ಸಾಧಿಸಿದೆ’
ಬೆಂಗಳೂರು : ಪ್ರತಿನಿತ್ಯ 6 ಲಕ್ಷ ಲೀಟರ್ ಹಾಲು ಸಂಸ್ಕರಣಾ ಸಾಮರ್ಥ್ಯ ಉಳ್ಳ ಹಾಗೂ ಅತ್ಯಾಧುನಿಕ ತಾಂತ್ರಿಕತೆಯ ಮೆಗಾ ಡೈರಿಯನ್ನು ಗುರುವಾರ ವಿಧ್ಯುಕ್ತವಾಗಿ ರಾಷ್ಟ್ರಕ್ಕೆ ಸಮರ್ಪಿಸಲಾಯಿತು. ಈ ಮೆಗಾ ಡೈರಿ ಹಾಗೂ ಹೈನೋದ್ಯಮದ ರಜತ ಮಹೋತ್ಸವವನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಉದ್ಘಾಟಿಸಿದರು.
ಡೈರಿಯನ್ನು ಉದ್ಘಾಟಿಸಿ, ಅದರ ಕಾರ್ಯವೈಖರಿಯನ್ನು ವೀಕ್ಷಿಸಿ ಮಾತನಾಡಿದ ಕೃಷ್ಣ, ಪಂಚವಾರ್ಷಿಕ ಯೋಜನೆಗಳ ಫಲವಾಗಿ ರಾಷ್ಟ್ರ ಉತ್ಪಾದನಾ ಕ್ಷೇತ್ರದಲ್ಲಿ ಸ್ವಾವಲಂಬನೆಯನ್ನು ಸಾಧಿಸಿದೆ. ಪರಸ್ಪರ ಸಹಕಾರದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂದು ನುಡಿದರು. ಸಹಕಾರಿ ಕ್ಷೇತ್ರದಲ್ಲಿ ಸರಕಾರ ಯಾವುದೇ ಕಾರಣಕ್ಕೂ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.
ಸ್ಪರ್ಧೆ ಎದುರಿಸಲು ಸಿದ್ಧ : ರಾಜ್ಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಂಧ್ರಪ್ರದೇಶದೊಂದಿಗೆ ಸ್ಪರ್ಧೆ ಎದುರಿಸುತ್ತಿರುವಂತೆಯೇ ಹಾಲು ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿರುವ ಗುಜರಾತ್ನೊಂದಿಗೆ ಸ್ಪರ್ಧೆ ಎದುರಿಸುತ್ತಿದೆ. ಈ ಸ್ಪರ್ಧೆಯಲ್ಲಿ ಕರ್ನಾಟಕ ಅಗ್ರೇಸರನಾಗುವಂತೆ ಮಾಡಲು ರೈತರು ಶ್ರಮಪಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಕ್ಕರೆ ಸಚಿವ ಎ. ಕೃಷ್ಣಪ್ಪ, ಕರ್ನಾಟಕ ಹಾಲು ಮಹಾ ಮಂಡಳಿ ಅಧ್ಯಕ್ಷ ಎಚ್.ಡಿ. ರೇವಣ್ಣ, ಹೈನು ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಡಾ. ಅಮೃತಾ ಪಟೇಲ್, ರಾಷ್ಟ್ರೀಯ ಹೈನು ಸಹಕಾರಿ ಮಹಾಮಂಡಳದ ಅಧ್ಯಕ್ಷ ಡಾ. ಕುರಿಯನ್, ಸಹಕಾರ ಸಚಿವ ಡಿ.ಕೆ. ಶಿವಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು.ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications