ವರ್ತುಲ ರಸ್ತೆಗೆ ದೇವೇಗೌಡ, ಅವೆನ್ಯೂಗೆ ವೆಂಕಟಗಿರಿಗೌಡರ ಹೆಸರು
ಬೆಂಗಳೂರು : ನಗರದ ವರ್ತುಲ ರಸ್ತೆ(ರಿಂಗ್ ರೋಡ್)ಗೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಹೆಸರು ಮತ್ತು ನಗರದ ಹೃದಯ ಭಾಗದಲ್ಲಿರುವ ಅವೆನ್ಯೂ ರಸ್ತೆಗೆ ಮಾಜಿ ಸಂಸದ ಪ್ರೊ. ವೆಂಕಟಗಿರಿ ಗೌಡರ ಹೆಸರನ್ನು ಇಡಲು ಮಹಾನಗರ ಪಾಲಿಕೆ ಬುಧವಾರ ಒಪ್ಪಿಗೆ ನೀಡಿದೆ.
ಮಹಾನಗರ ಪಾಲಿಕೆಯ ಮಾಸಿಕ ಸಭೆಯಲ್ಲಿ ಮಾಜಿ ಮೇಯರ್ ಹುಚ್ಚಪ್ಪ ಅವರು ಮಾಜಿ ಪ್ರಧಾನಿ ದೇವೇಗೌಡರ ಹೆಸರನ್ನು ರಿಂಗ್ ರೋಡ್ಗೆ ಇಡುವ ನಿರ್ಣಯ ಮಂಡಿಸಿದರು. ಸಾಕಷ್ಟು ಚರ್ಚೆಯ ಬಳಿಕ ಈ ನಿರ್ಣಯವನ್ನು ಅನುಮೋದಿಸಲಾಯಿತು.
ಇದಾದ ಬಳಿಕ ಮೇಯರ್ ಎಂ. ರಾಮಚಂದ್ರಪ್ಪ ಅವರು ನಗರದ ಅವೆನ್ಯೂ ರಸ್ತೆಗೆ ಮಾಜಿ ಸಂಸದ, ಖ್ಯಾತ ಅರ್ಥಶಾಸ್ತ್ರಜ್ಞ ಪ್ರೊ. ವೆಂಕಟಗಿರಿಗೌಡರ ಹೆಸರನ್ನು ಸೂಚಿಸುವ ನಿರ್ಣಯ ಮಂಡಿಸಿದರು. ಈ ಎರಡೂ ನಿರ್ಣಯಗಳಿಗೆ ಬಿಜೆಪಿ ಸದಸ್ಯರು ಅಸಮಾಧಾನ ವ್ಯಕ್ತ ಪಡಿಸಿದರೂ, ಪರ ವಿರೋಧಗಳ ನಡುವೆ ಎರಡೂ ನಿರ್ಣಯಗಳು ಒಪ್ಪಿಗೆ ಪಡೆದವು.
ಪರಸ್ಪರ ಬದ್ಧ ವೈರಿಗಳಾದ ದೇವೇಗೌಡರು ಹಾಗೂ ವೆಂಕಟಗಿರಿ ಗೌಡರ ಹೆಸರನ್ನು ನಗರದ ಎರಡು ಪ್ರಮುಖ ರಸ್ತೆಗಳಿಗೆ ಸೂಚಿಸಿರುವ ಬಗ್ಗೆ ಪಾಲಿಕೆಯ ಕೆಲ ಸದಸ್ಯರು ಅಚ್ಚರಿ ವ್ಯಕ್ತಪಡಿಸಿದರು. ಪ್ರಸ್ತುತ, ಪಾಲಿಕೆಯ ನಿರ್ಣಯವನ್ನು ಸರಕಾರದ ಒಪ್ಪಿಗೆಗಾಗಿ ಕಳುಹಿಸಲಾಗಿದೆ.
ನಿಮಗೇನನಿಸುತ್ತೆ ?
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ದೇವನಹಳ್ಳಿ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಾರ ಹೆಸರಿಡಬೇಕು?
ನಾಮಕರಣ ನವೀಕರಣ : ನಮ್ಮೂರ ದಾರಿಗಿಡಿ ದಿಗ್ಗಜರ ಹೆಸರ ರಂಗವಲ್ಲಿ
ಕಾರವಾರದ ಬೀಚ್ಗೆ ಟಾಗೋರ್ ಹೆಸರೇಕೆ?
ಮುಖಪುಟ / ಇವತ್ತು... ಈ ಹೊತ್ತು...
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications