ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬರ ಪೀಡಿತ ಧಾರವಾಡ ಜಿಲ್ಲೆಯ 127 ಹಳ್ಳಿಗಳಲ್ಲಿ ‘ಕೂಲಿಗಾಗಿ ಕಾಳು’
ಕಲಘಟಕಿ : ಈಶಾನ್ಯ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮವಾಗಿ ರಾಜ್ಯ ಭೀಕರ ಬರಗಾಲ ಎದುರಿಸುತ್ತಿದ್ದು, ಇದಕ್ಕೆ ಧಾರವಾಡ ಜಿಲ್ಲೆಯೂ ಹೊರತಾಗಿಲ್ಲ. ಜಿಲ್ಲೆಯ ಸುಮಾರು 127 ಹಳ್ಳಿಗಳು ತೀವ್ರ ಬರಗಾಲಕ್ಕೆ ತುತ್ತಾಗಿವೆ. ಈ ಹಿನ್ನೆಲೆಯಲ್ಲಿ ಕೂಲಿಗಾಗಿ ಕಾಳು ಯೋಜನೆ ಜಾರಿಗೆ ತರಲಾಗಿದೆ.
ಈ ಉದ್ದೇಶಕ್ಕಾಗಿ ರಾಜ್ಯ ಸರಕಾರ 40 ಲಕ್ಷ ರುಪಾಯಿಗಳನ್ನು ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ.ಎಂ. ಹಿಂಡಸಗೇರಿ ಶುಕ್ರವಾರ ಇಲ್ಲಿ ಹೇಳಿದ್ದಾರೆ. ಕೂಲಿಗಾಗಿ ಕಾಳು ಯೋಜನೆಯಡಿ ನವಲಗುಂದ, ಕುಂದಗೋಳ, ಹುಬ್ಬಳ್ಳಿ, ಕಲಘಟಕಿ ತಾಲೂಕುಗಳಲ್ಲಿ ಬರ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
(ಪಿ.ಟಿ.ಐ)
Comments
Story first published: Friday, August 31, 2001, 0:00 [IST]