ಜನವರಿ18ರಿಂದ ಪರ್ಯಾಯ : ಶ್ರೀಕೃಷ್ಣನಿಗೆ ಭಾರೀ ವಜ್ರ ಕವಚ
ಬೆಂಗಳೂರು : ಬರುವ ಜನವರಿ 18ರಿಂದ ಉಡುಪಿ ಕ್ಷೇತ್ರದಲ್ಲಿ ಪರ್ಯಾಯ ಮಹೋತ್ಸವ ಹಾಗೂ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಪೂಜಾ ಕೈಂಕರ್ಯಗಳು ಪ್ರಾರಂಭವಾಗಲಿವೆ. ಶ್ರೀಕೃಷ್ಣ ಮೂರ್ತಿಗೆ 2 ಕೋಟಿ ರುಪಾಯಿ ಮೌಲ್ಯದ ವಜ್ರ ಕವಚ ತೊಡಿಸಲಿರುವುದು ಈ ಪರ್ಯಾಯದ ವಿಶೇಷ.
ಮಧ್ವಾಚಾರ್ಯರ ಪರಂಪರೆಯ ಯತಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥರು ಶ್ರೀ ವಿಶ್ವೇಶತೀರ್ಥ ಸ್ವಾಮಿಗಳಿಂದ ಶ್ರೀ ಕೃಷ್ಣನ ಪೂಜಾ ಕೈಂಕರ್ಯಗಳನ್ನು ವಹಿಸಿಕೊಳ್ಳಲಿದ್ದಾರೆ. ನಗರದಲ್ಲಿ ಚಾತುರ್ಮ್ಯಾಸ್ಯ ಪೂಜಾ ದೀಕ್ಷೆ ನಡೆಸುತ್ತಿರುವ ಶ್ರೀ ವಿದ್ಯಾಧೀಶ ತೀರ್ಥರು ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಶ್ರೀ ವಿದ್ಯಾಮಾನ್ಯ ತೀರ್ಥಂಕರರು ಸಂಕಲ್ಪಿಸಿದ ವಜ್ರ ಕವಚವನ್ನು ಸಿದ್ಧಪಡಿಸಿ, ಪರ್ಯಾಯ ಉತ್ಸವದ ವೇಳೆ ಶ್ರೀಕೃಷ್ಣನಿಗೆ ತೊಡಿಸುವುದಾಗಿ ಅವರು ಹೇಳಿದರು. ಪರ್ಯಾಯದ ಇನ್ನಷ್ಟು ಕಾರ್ಯಕ್ರಮಗಳು ಹಾಗೂ ಮುಂದುವರಿದ ಯೋಜನೆಗಳು ಇಂತಿವೆ...
- ಭಾರತೀಯ ದಾರ್ಶನಿಕ ಸಾಹಿತ್ಯದ ಅಧ್ಯಯನ ಮತ್ತು ಸಂಶೋಧನೆಗೆ ಪ್ರೋತ್ಸಾಹ
- ವೇದಾಧ್ಯಯನ, ನಿತ್ಯ ಪ್ರವಚನ, ಗ್ರಂಥ ಪಾಠ ಪ್ರವಚನ, ಧಾರ್ಮಿಕ ಸಾಹಿತ್ಯ ಪ್ರಕಟಣೆಗೆ ಒತ್ತು
- ಬಡ ವಿದ್ಯಾರ್ಥಿಗಳಿಗೆ ಹಾಗೂ ಬಡ ಜನರಿಗೆ ನಿತ್ಯ ಅನ್ನದಾನ
- ಸ್ವ- ಉದ್ಯೋಗ ಯೋಜನೆಗೆ ಬೆಂಬಲ
- ಗೋಪಾಲಕೃಷ್ಣನ ಸನ್ನಿಧಿಯಲ್ಲಿ ಗೋಸೇವೆ. ಸಹಸ್ರಕೋಟಿ ರಾಮನಾಮ ಲೇಖನ, ಯಜ್ಞ, ಹೋಮ- ಹವನಗಳನ್ನು ನಡೆಸುವುದು.
- 100 ವಿದ್ಯಾರ್ಥಿಗಳಿಗೆ ವೇದಪಾಠ ಶಾಲೆ ಪ್ರಾರಂಭಿಸುವುದು.
ವಜ್ರ ಕವಚಕ್ಕೆ ಈಗಾಗಲೇ 25 ಲಕ್ಷ ರುಪಾಯಿಯಷ್ಟು ಧನ ಸಹಾಯ ಮಾಡಲು ದಾನಿಗಳು ಮುಂದೆ ಬಂದಿದ್ದಾರೆ. ಭಕ್ತಾದಿಗಳು ಈ ಕಾರ್ಯಕ್ಕೆ ಸಾಕಷ್ಟು ನೆರವನ್ನು ಕೊಟ್ಟು, ಆಧ್ಯಾತ್ಮಿಕ ಪಾಲುದಾರಿಕೆಗೆ ಪಾತ್ರರಾಗಬೇಕು ಎಂದು ಶ್ರೀ ವಿದ್ಯಾಧೀಶ ತೀರ್ಥರು ಕರೆ ಕೊಟ್ಟರು.
ದಾನಿಗಳು ಚೆಕ್ ಅಥವಾ ಡಿಡಿಯನ್ನು ಈ ವಿಳಾಸಕ್ಕೆ ಕಳುಹಿಸಬಹುದು- ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಶ್ರೀ ಪಲಿಮಾರು ಮಠ, ರಥಬೀದಿ, ಉಡುಪಿ- 576 101. ಇನ್ನಷ್ಟು ಮಾಹಿತಿ ಪಡೆಯಲು (08252) 23402 ನಂಬರಿಗೆ ಫೋನಾಯಿಸಿ.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications