ಬೆಂಗಳೂರಿನಲ್ಲಿ ಮೂರು ದಿನಗಳ ಅಂತರರಾಷ್ಟ್ರೀಯ ಕಾಫಿ ಉತ್ಸವ
ಬೆಂಗಳೂರು : ನಗರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬರುವ ವರ್ಷದ ಫೆಬ್ರವರಿಯಲ್ಲಿ ಮೂರು ದಿನಗಳ ಕಾಲ ಅಂತರ ರಾಷ್ಟ್ರೀಯ ಕಾಫಿ ಉತ್ಸವ ನಡೆಯಲಿದೆ. ಈ ಉತ್ಸವಕ್ಕೆ ಸಂಬಂಧಿಸಿದ ವಿವರಗಳನ್ನು ಒಳಗೊಂಡ ವೆಬ್ಸೈಟ್ನ್ನು ರಾಜ್ಯಪಾಲರಾದ ವಿ.ಎಸ್. ರಮಾದೇವಿ ಉದ್ಘಾಟಿಸಿದರು.
ರಾಜ ಭವನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ರಮಾದೇವಿಯವರು www.iicf2002.comವೆಬ್ಸೈಟ್ಗೆ ಚಾಲನೆ ನೀಡಿದರು. ನಗರದಲ್ಲಿ ಫೆಬ್ರವರಿ 15ರಿಂದ 17ರವರೆಗೆ ನಡೆಯುವ ಕಾಫಿ ಉತ್ಸವದಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟ ದ ಕಾಫಿ ಉದ್ದಿಮೆಗಳು ಭಾಗವಹಿಸಲಿವೆ.
ಭಾರತದ ಕಾಫಿ ತಳಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ನೀಡುವುದು, ಭಾರತೀಯ ಕಾಫಿ ತಳಿಗಳ ಪ್ರದರ್ಶನ, ಮಾರುವವರು ಮತ್ತು ಕೊಳ್ಳುವವರನ್ನು ಒಂದೇ ವೇದಿಕೆಯಡಿ ಸೇರಿಸುವುದು ಈ ಉತ್ಸವದ ಉದ್ದೇಶವಾಗಿದೆ. ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಜರುಗಲಿವೆ. ಸುಮಾರು 100ಕ್ಕೂ ಹೆಚ್ಚು ವಿದೇಶೀ ಉದ್ಯಮ ಪ್ರತಿನಿಧಿಗಳು ಸೇರಿದಂತೆ ಒಟ್ಟು 700 ಮಂದಿ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯಪಾಲರು ‘ಐ ಲವ್ ಕಾಫಿ’ ಎನ್ನುತ್ತಾ ಕಾಫಿ ಬಗೆಗಿನ ತಮ್ಮ ಆಸಕ್ತಿಯನ್ನು ಹೇಳಿಕೊಂಡರು. ಆದರೆ ಕಾಫಿ ಬೆಳೆಗಾರ, ಮಧ್ಯವರ್ತಿಯ ಶೋಷಣೆಯಿಂದ ಬೆಳೆಗೆ ಸೂಕ್ತ ಬೆಲೆ ಪಡೆಯುತ್ತಿಲ್ಲ. ಗ್ರಾಹಕರು ಮತ್ತು ಬೆಳೆಗಾರರು ಮೋಸ ಹೋಗಿ ನಷ್ಟ ಅನುಭವಿಸುತ್ತಿರುತ್ತಾರೆ ಎಂದ ರಾಜ್ಯಪಾಲರು ಕೆಲವು ಸಲಹೆಗಳನ್ನು ಮುಂದಿಟ್ಟರು :
- ಗುಣ ಮಟ್ಟ ದ ಕಡೆಗೆ ಕಾಫಿ ಮಂಡಳಿ ಗಮನ ಹರಿಸಬೇಕು. ಯಾಕೆಂದರೆ ವಿದೇಶದಲ್ಲಿ ಮತ್ತು ಉತ್ತರ ಭಾರತದಲ್ಲಿಯೂ ಜನರು ಕಾಫಿಯನ್ನು ಇಷ್ಟಪಡಲಾರಂಭಿಸಿದ್ದಾರೆ.
- ಕಾಫಿ ಮಂಡಳಿಯ ಮಾರಾಟ ಕೇಂದ್ರಗಳಲ್ಲಿ ಕಾಫಿ ಜೊತೆ ಗ್ರಾಹಕರಿಗೆ ದೋಸೆ ಕೂಡ ದೊರೆಯುವಂತಾಗಬೇಕು. ಇದು ವ್ಯಾಪಾರದ ಗುಟ್ಟು.
- ಮಾರಾಟ, ವಿತರಣಾ ವ್ಯವಸ್ಥೆಯಲ್ಲಿನ ದೋಷಗಳ ನಿವಾರಣೆಯೇ ಬೆಲೆ ಕುಸಿತಕ್ಕೆ ಮದ್ದು.
- ಮಧ್ಯವರ್ತಿಯ ಕಾಟದಿಂದ ಗ್ರಾಹಕನನ್ನು ಮತ್ತು ಬೆಳೆಗಾರನನ್ನು ಬಚಾವ್ ಮಾಡಲು, ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಯಾಗಬೇಕು.
- (ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications