ಆಂಧ್ರಪ್ರದೇಶದಲ್ಲಿ ಅಕ್ಕ ಮಹಾದೇವಿ ಪ್ರತಿಮೆ ಸ್ಥಾಪನೆಗೆ ಸಮ್ಮತಿ
ಬೆಂಗಳೂರು : ತನ್ನೆಲ್ಲಾ ವಚನಗಳನ್ನೂ ಶ್ರೀಶೈಲ ಮಲ್ಲಿಕಾರ್ಜುನನಿಗೆ ಅರ್ಪಣೆ ಮಾಡಿದ ವಚನಕಾರ್ತಿ, ಶಿವಶರಣೆ ಅಕ್ಕಮಹಾದೇವಿಯ ಪ್ರತಿಮೆಯನ್ನು ಆಂಧ್ರಪ್ರದೇಶದ ಕದಳಿಯಲ್ಲಿ ಸ್ಥಾಪಿಸಲು ಆಂಧ್ರ ಸರಕಾರ ಒಪ್ಪಿಗೆ ನೀಡಿದೆ. ಈ ವಿಷಯವನ್ನು ರಾಜ್ಯ ಸಂಸ್ಕೃತಿ ಸಚಿವೆ ರಾಣಿ ಸತೀಶ್ ತಿಳಿಸಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾದ ಆಶ್ರಯದಲ್ಲಿ ನಡೆದ ವೀರಶೈವ ಧರ್ಮ ಜಾಗೃತಿ ಸಮ್ಮೇಳನ ಹಾಗೂ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಹಾಗೂ ಲೇಖಕಿ ಲೀಲಾದೇವಿ ಆರ್. ಪ್ರಸಾದ್ ಅವರಿಗೆ ‘ಅಕ್ಕ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು.
ಮಹಾದೇವಿ ಅಕ್ಕನ ಪ್ರತಿಮೆಯನ್ನು ಕದಳಿಯಲ್ಲಿ ಸ್ಥಾಪಿಸಲು ಅನುಮತಿ ಕೋರಿ ತಾವು ಆಂಧ್ರ ಪ್ರದೇಶ ಸರಕಾರದ ಧಾರ್ಮಿಕ ದತ್ತಿ ಸಚಿವರಿಗೆ ಸಲ್ಲಿಸಿದ್ದ ಮನವಿಗೆ ಮಾನ್ಯತೆ ಸಿಕ್ಕಿದೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಕದಳಿಯಲ್ಲಿ ಪ್ರತಿಮೆ ಸ್ಥಾಪಿಸುವುದರ ಜತೆಗೆ ಆ ಗ್ರಾಮವನ್ನು ಸಂಪೂರ್ಣ ಅಭಿವೃದ್ಧಿ ಪಡಿಸುವುದಾಗಿ ತಿಳಿಸಿದ್ದಾರೆ ಎಂದೂ ಹೇಳಿದರು.
ಸಿದ್ಧಗಂಗಾ ಮಠಾಧ್ಯಕ್ಷ ಡಾ. ಶಿವಕುಮಾರ ಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ರಾಮಲಿಂಗಾರೆಡ್ಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಿ. ಸೋಮಶೇಖರ್ ಮೊದಲಾದವರು ಪಾಲ್ಗೊಂಡಿದ್ದರು. ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಗೊ.ರು. ಚನ್ನಬಸಪ್ಪ ಅವರಿಗೆ ಶರಣಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications