ಸೆ.6ರ ಕಾವೇರಿ ಸಭೆಯಲ್ಲಿ ಬರಪರಿಸ್ಥಿತಿಯ ವಿವರಣೆ : ಪಾಟೀಲ್
ಬೆಂಗಳೂರು : ತಮಿಳುನಾಡಿನ ಕುರುವೈ ಬೆಳೆಗೆ ನೀರು ಹರಿಸುವ ಸಂಬಂಧ ಸೆಪ್ಟೆಂಬರ್ 6ರ ಗುರುವಾರ ನವದೆಹಲಿಯಲ್ಲಿ ಕರೆಯಲಾಗಿರುವ ಸಭೆಯಲ್ಲಿ ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಸಂಪೂರ್ಣವಾಗಿ ವಿವರಿಸಲಾಗುವುದು ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಸೋಮವಾರ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಅಣೆಕಟ್ಟು ಮತ್ತು ಅಭಿವೃದ್ಧಿ ಕುರಿತ ವಿಚಾರಸಂಕಿರಣದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಳೆಯನ್ನೇ ಅವಲಂಬಿಸಿರುವ ರಾಜ್ಯ ಈಬಾರಿ ಭೀಕರ ಬರದಿಂದ ತತ್ತರಿಸಿದೆ.
ರಾಜ್ಯದ ಹಲವಾರು ಜಲಾಶಯಗಳು ಬರಿದಾಗಿದ್ದು, ಕೃಷಿ ಹಾಗೂ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಬಂದೊದಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವುದು ಸಾಧ್ಯವೇ ಇಲ್ಲದ ಮಾತು ಎಂದು ಅವರು, ಸರಕಾರದ ನಿಲುವನ್ನು ಪುನರುಚ್ಚರಿಸಿದರು.
ಸೆ.6ರಂದು ದೆಹಲಿಯಲ್ಲಿ ನಡೆಯುವ ಸಭೆಗೆ ರಾಜ್ಯದ ಪರವಾಗಿ ಮುಖ್ಯ ಕಾರ್ಯದರ್ಶಿಯವರು ಪಾಲ್ಗೊಳ್ಳುತ್ತಿದ್ದು, ರಾಜ್ಯ ಎದುರಿಸುತ್ತಿರುವ ಬರಗಾಲದ ಪರಿಸ್ಥಿತಿಯ ಬಗ್ಗೆ ವಿವರಿಸುತ್ತಾರೆ ಎಂದೂ ಅವರು ಹೇಳಿದರು. ಕೆ.ಆರ್.ಎಸ್.ನಲ್ಲಿ ನೀರಿನ ಮಟ್ಟ ಕುಸಿದಿದೆ.
ಮಲಪ್ರಭಾ ಅಣೆಕಟ್ಟೆಯಿಂದ ಮುಂಗಾರು ಬೆಳೆಗೆ ನೀರು ಬಿಟ್ಟಿಲ್ಲ. ಈ ಎಲ್ಲ ವಾಸ್ತವ ಸಂಗತಿಗಳನ್ನೂ ಕಾವೇರಿ ನಿರ್ವಹಣಾ ಸಮಿತಿ ಸಭೆಯಲ್ಲಿ ವಿವರಿಸಲಾಗುವುದು ಎಂದರು. ರಾಜ್ಯದ ಬರಪರಿಸ್ಥಿತಿಯ ಬಗ್ಗೆ ಜಯಲಲಿತಾ ಅವರಿಗೂ ಅರಿವಿದ್ದು, ಅವರು ನಮ್ಮ ನಿಲುವಿನೊಂದಿಗೆ ಸ್ಪಂದಿಸುತ್ತಾರೆ ಎಂಬ ಆಶಾಭಾವನೆಯನ್ನೂ ಅವರು ವ್ಯಕ್ತಪಡಿಸಿದರು.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications