ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮೀಸಲಾತಿನೀಡಲು ಸರಕಾರದ ಒಪ್ಪಿಗೆ
ಬೆಂಗಳೂರು : ಒಂದರಿಂದ ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಸರಕಾರಿ ಹುದ್ದೆಗಳಲ್ಲಿ ಶೇ 5ರಷ್ಟು ಮೀಸಲಾತಿ ನೀಡಲು ರಾಜ್ಯ ಸರಕಾರ ಒಪ್ಪಿಕೊಂಡಿದೆ.
ಅಲ್ಲದೆ 3ನೇ ತರಗತಿಯಿಂದ ಕನ್ನಡ ಕಲಿಕೆ ಕಡ್ಡಾಯ ಹಾಗೂ ಶಿಕ್ಷಣ ಮತ್ತು ಮಾಧ್ಯಮಕ್ಕೆ ಸಂಬಂಧಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ ವರದಿಯ ಎಲ್ಲ ಶಿಫಾರಸುಗಳನ್ನು ಜಾರಿಗೊಳಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಮಂಗಳವಾರ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಚ್. ವಿಶ್ವ ನಾಥ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಒಂದರಿಂದ 10ನೇತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ವೃತ್ತಿ ಶಿಕ್ಷಣದಲ್ಲಿ ಶೇ 5ರಷ್ಟು ಮೀಸಲಾತಿ ಜಾರಿಗೊಳಿಸಲಾಗಿದ್ದು, ಅದು ಯಶಸ್ವಿಯಾಗಿದೆ. ಅದೇ ರೀತಿ ಸರಕಾರಿ ಉದ್ಯೋಗದಲ್ಲಿಯೂ ಶೇ 5ರಷ್ಟು ಸಮಾನಾಂತರ ಒಳ ಮೀಸಲಾತಿ ನೀಡಲಾಗುವುದು ಎಂದು ವಿಶ್ವನಾಥ್ ಹೇಳಿದರು.
1ರಿಂದ 7ನೇ ತರಗತಿಯವರೆಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವ ಶಿಫಾರಸಿಗೆ ಸರಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಆದರೆ ಈ ಕುರಿತು ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಅಂತಿಮ ನಿರ್ಣಯ ಕೈಗೊಂಡಿಲ್ಲ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಬರಗೂರು ರಾಮಚಂದ್ರಪ್ಪ, ಮುಖ್ಯಮಂತ್ರಿ ಕೃಷ್ಣ ಹಾಗೂ ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್ ಭಾಗವಹಿಸಿದ್ದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು :
- ಕನ್ನಡೇತರ ಶಾಲೆಗಳಲ್ಲಿ 3ನೇ ತರಗತಿಯಿಂದ ಕನ್ನಡ ಭಾಷಾ ಕಲಿಕೆ ಮತ್ತು ಕನ್ನಡ ಶಾಲೆಗಳಲ್ಲಿ 3ನೇ ತರಗತಿಯಿಂದ ಇಂಗ್ಲಿಷ್ ಕಲಿಸುವಿಕೆ ಕಡ್ಡಾಯ
- ಉರ್ದು, ಮರಾಠಿ, ತಮಿಳು, ತೆಲುಗು ಶಾಲೆಗಳಿಗೆ ಪೂರ್ಣ ಕಾಲಿಕ ಕನ್ನಡ ಬೋಧಕರ ನೇಮಕ
- ವೃತ್ತಿ ಶಿಕ್ಷಣದಲ್ಲಿ ಒಂದು ವರ್ಷ ಕನ್ನಡ ಭಾಷೆ ಕಲಿಕೆ ಕಡ್ಡಾಯ
- ಕೃಷಿ ವಿಶ್ವ ವಿದ್ಯಾಲಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ತರಗತಿಯಲ್ಲಿ ಕನ್ನಡ ಕಲಿಯಲು ಅನುಕೂಲವಾಗುವಂತೆ ಕನ್ನಡ ವಿಭಾಗಗಳನ್ನು ತೆರೆಯುವುದು
- ಗಡಿಭಾಗದ ಕನ್ನಡಿಗರಿಗೆ ಅನುಕೂಲವಾಗುವಂತೆ ಮಹಾರಾಷ್ಟ್ರದ ಡಿಪ್ಲೊಮಾ ಇನ್ ಎಜುಕೇಷನ್ನ್ನು ರಾಜ್ಯದಲ್ಲಿ ಟಿಸಿಎಚ್ಗೆ ಸಮಾನಾಂತರವಾಗಿ ಪರಿಗಣಿಸುವುದ
ನಿಮಗೇನನಿಸುತ್ತದೆ ?
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications