ಮೈಸೂರು ದಸರಾ ಮೆರವಣಿಗೆ ರದ್ದು : ಸಂಸ್ಕೃತಿ ಸಚಿವರ ಇಂಗಿತ
ಮೈಸೂರು : ಬರದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹಲವು ಉತ್ಸವಗಳನ್ನು ರದ್ದು ಮಾಡಿದೆ. ದಸರೆಯನ್ನು ಸರಳವಾಗಿ ಆಚರಿಸಲು ನಿರ್ಧರಿಸಿದೆ. ಈಗ ದಸರಾ ಮೆರವಣಿಗಯನ್ನು ಕೂಡ ರದ್ದು ಮಾಡುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುತ್ತಿದೆ. ಈ ಸಂಬಂಧ ದಸರಾ ಸಮಿತಿ ಸಭೆಗೆ ಮೊದಲೇ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ರಾಜ್ಯದ ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ತಿಳಿಸಿದ್ದಾರೆ.
ಇಲ್ಲಿನ ರಂಗಾಯಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಬರದಿಂದ ರಾಜ್ಯದ ಜನತೆ ಕಂಗಾಲಾಗಿರುವ ಹಿನ್ನೆಲೆಯಲ್ಲಿ ದಸರಾ ಆಚರಣೆ ಬೇಡ ಎನ್ನುವ ಅಭಿಪ್ರಾಯವನ್ನು ದಸರಾ ಸಮಿತಿಯ ಮೊದಲ ಸಭೆಯಲ್ಲೇ ತಾವು ಮಂಡಿಸಿದ್ದಾಗಿ ಹೇಳಿದರು.
ಆದರೆ, ನಾಡಿನ ಸಂಸ್ಕೃತಿಯ ಸಂಕೇತವಾದ ಈ ಉತ್ಸವವನ್ನು ಸರಳವಾಗಿ ಆಚರಿಸಲು ಸಭೆ ನಿರ್ಧಸಿತು. ಹೀಗಾಗಿ ಈ ಬಾರಿಯ ದಸರಾ ಉತ್ಸವಕ್ಕೆ 30 ಲಕ್ಷ ರುಪಾಯಿಗಳನ್ನು ಮಾತ್ರ ಬಿಡುಗಡೆ ಮಾಡಲು ನಿರ್ಧರಿಸಲಾಯಿತು. ಕಳೆದ ಬಾರಿ 75 ಲಕ್ಷ ನೀಡಲಾಗಿತ್ತು ಎಂದು ಅವರು ಹೇಳಿದರು.
ದಸರಾ ಆಚರಣೆಯ ಉಪಸಮಿತಿಗಳ ಸಂಖ್ಯೆಯನ್ನೂ ಐದಕ್ಕೆ ಇಳಿಸಲಾಗಿದೆ. ಈಗಾಗಲೇ ದಸರಾ ಸಮಿತಿಗೆ 20 ಲಕ್ಷ ರುಪಾಯಿ ಬಿಡುಗಡೆ ಮಾಡಲಾಗಿದೆ. ದಸರಾ ಮೆರವಣಿಗೆಯ ಅಂಬಾರಿ ಮತ್ತು ಅಂಬಾರಿ ವಿಮೆಗೆ 8 ಲಕ್ಷ ರುಪಾಯಿ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕವಿಗೋಷ್ಠಿಗೆ 6 ಲಕ್ಷ ರುಪಾಯಿ, ಮೆರವಣಿಗೆ, ಸ್ತಬ್ಧ ಚಿತ್ರ ಮತ್ತು ದೀಪಾಲಂಕಾರ ಸಮಿತಿಗೆ 8 ಲಕ್ಷ ರುಪಾಯಿ, ಕ್ರೀಡಾ ಸಮಿತಿಗೆ 5 ಲಕ್ಷ, ಕುಸ್ತಿ ಸಮಿತಿಗೆ 3 ಲಕ್ಷ ಹಾಗೂ ವಿವಿಧ ಗಣ್ಯರು ಮತ್ತು ಕಲಾವಿದರ ವಸತಿ ಸೌಕರ್ಯಕ್ಕಾಗಿ 75 ಸಾವಿರ ರುಪಾಯಿ ಬಿಡುಗೆಡ ಮಾಡಲಾಗುವುದು ಎಂದರು.
ಈ ಬಾರಿ ಬರದ ಹಿನ್ನೆಲೆಯಲ್ಲಿ ಈ ಬಾರಿ ದಸರಾ ಕ್ರೀಡಾಕೂಟವನ್ನೂ ಕೈಬಿಡಲಾಗಿ ಎಂದು ಪ್ರಕಟಿಸಿದ್ದರೂ 5 ಲಕ್ಷ ಬಿಡುಗಡೆ ಮಾಡಿದ್ದೇಕೆ ಎಂಬ ಪ್ರಶ್ನೆಗೆ ಸಚಿವರ ಬಳಿ ಉತ್ತರ ಇರಲಿಲ್ಲ. ಆದರೆ, ಸ್ತಬ್ಧ ಚಿತ್ರಗಳಿಗೆ ವಿವಿಧ ಇಲಾಖೆಗಳು ಮಾಡುವ ವೆಚ್ಚವನ್ನು ನಿಯಂತ್ರಿಸುವ ಬಗ್ಗೆ ತಾವು ಮುಂದಿನ ಸಭೆಯಲ್ಲಿ ಚರ್ಚಿಸುವುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಮೈಸೂರು ವಿಭಾಗಾಧಿಕಾರಿಗಳಾದ ಎಚ್. ಭಾಸ್ಕರ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಯರಾಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications