ಬೆಂಗಳೂರಿನಲ್ಲಿ 22 ಫ್ಲೈ ಓವರ್ ನಿರ್ಮಾಣಕ್ಕೆ ಅಧ್ಯಯನ ಆರಂಭ
ಬೆಂಗಳೂರು : ಬೆಂಗಳೂರಿನ ಸಂಚಾರದ ಒತ್ತಡ ನಿಯಂತ್ರಿಸಲು 22 ಮೇಲು ಸೇತುವೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದ್ದು, ಹುಡ್ಕೋ ನೆರವಿನಿಂದ ಈ ಕಾಮಗಾರಿಗಳಿಗೆ ಬರುವ ಜನವರಿಯಲ್ಲಿ ಚಾಲನೆ ದೊರೆಯಲಿದೆ. ಇದಕ್ಕಾಗಿ ಈಗಾಗಲೇ ಅಧ್ಯಯನ ಆರಂಭವಾಗಿದೆ.
ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಕೈಗೆತ್ತಿಕೊಂಡಿರುವ ಈ ಕಾಮಗಾರಿಗಳ ಬಗ್ಗೆ ಅಧ್ಯಯನ ಆರಂಭಿಸಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ವರದಿ ಸಿದ್ಧವಾಗಲಿದೆ. ಜನವರಿಯಲ್ಲಿ ಯೋಜನೆಗಳಿಗೆ ಚಾಲನೆ ದೊರಕುವ ಸಾಧ್ಯತೆಗಳು ನಿಚ್ಚಳವಾಗಿವೆ ಎಂದು ಮೂಲಗಳು ತಿಳಿಸಿವೆ.
ಯೋಜನೆಗೆ ಹುಡ್ಕೋ ಸಂಸ್ಥೆ 175 ಕೋಟಿ ರುಪಾಯಿಗಳ ನೆರವು ನೀಡುತ್ತಿದ್ದು, ಮೊದಲ ಹಂತದಲ್ಲಿ ಹತ್ತು ಮೇಲು ಸೇತುವೆಗಳನ್ನು ನಿರ್ಮಿಸಲು ಬೆಂಗಳೂರಿನಲ್ಲಿ ಸ್ಥಳ ಗುರುತಿಸಲಾಗಿದೆ. ಆಗಸ್ಟ್ 26ರಿಂದ ಜಾರಿಗೆ ತರಲಾಗಿರುವ ಹೊಸ ಏಕಮುಖ ಸಂಚಾರ ವ್ಯವಸ್ಥೆಗೆ ಅನುಗುಣವಾಗಿ ಈ ಫ್ಲೈಓವರ್ಗಳ ನಿರ್ಮಾಣ ಆಗಲಿದೆ.
ಪ್ರಸ್ತುತ ಆನಂದರಾವ್ ವೃತ್ತ, ಮಹಾರಾಣಿ ಕಾಲೇಜು ವೃತ್ತ, ಕೆ.ಆರ್.ವೃತ್ತ, ಹಡ್ಸನ್ ವೃತ್ತ, ರಾಜಾಜಿನಗರದ ಮೋದಿ ಆಸ್ಪತ್ರೆ ರಸ್ತೆ ಮತ್ತು ಕಾರ್ಡ್ ರಸ್ತೆಯನ್ನು ಸಂಪರ್ಕಿಸುವ ವೃತ್ತ, ಲಾಲ್ಬಾಗ್ ಈಸ್ಟ್ ಗೇಟ್ ವೃತ್ತ, ನ್ಯಾಷನಲ್ ಕಾಲೇಜು ಮುಂಭಾಗದ ವೃತ್ತ, ಸೌತ್ ಎಂಡ್ ಸರ್ಕಲ್, ಟ್ರಿನಿಟಿ ವೃತ್ತದಿಂದ ವಿಕ್ಟೋರಿಯಾ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ವೃತ್ತ, ರಿಚ್ಮಂಡ್ ವೃತ್ತದಿಂದ ವೆಲ್ಲಾರದವರೆಗೆ ಹಾಗೂ ವಿಮಾನ ನಿಲ್ದಾಣ ರಸ್ತೆಯಿಂದ ಕೋರಮಂಗಲ ರಿಂಗ್ರಸ್ತೆವರೆಗೆ ಸಂಪರ್ಕ ಕಲ್ಪಿಸುವ ವೃತ್ತಗಳಲ್ಲಿ ಈ ಹೊಸ ಮೇಲು ಸೇತುವೆಗಳ ನಿರ್ಮಾಣ ಆಗಲಿದೆ.
ಕಾಲಮಿತಿ : ಮೇಲು ಸೇತುವೆಗಳು ನೇರರಸ್ತೆ, ಅಡ್ಡ ಮಾರ್ಗಗಳನ್ನು ಒಳಗೊಂಡಿದ್ದು, ಒಂದು ಮೇಲ್ಸೇತುವೆ ನಿರ್ಮಾಣಕ್ಕೆ 9ರಿಂದ 15 ತಿಂಗಳು ಬೇಕಾಗುತ್ತದೆ ಎಂದು ಅಂದಾಜು ಮಾಡಲಾಗಿದೆ. ಮೇಲ್ಸೇತುವೆಗಳ ಜೊತೆಗೆ ನೂರಕ್ಕೂ ಹೆಚ್ಚು ಜಂಕ್ಷನ್ಗಳನ್ನು ಅಭಿವೃದ್ಧಿ ಪಡಿಸಲೂ ನಿರ್ಧರಿಸಲಾಗಿದೆ.
ವಾರ್ತಾ ಸಂಚಯ:
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications