ಭಾರತದ ಯಾವುದೇ ಯುದ್ಧ ಖೈದಿಗಳು ನಮ್ಮ ವಶದಲ್ಲಿಲ್ಲ - ಪಾಕ್
ಇಸ್ಲಮಾಬಾದ್ : ಪಾಕಿಸ್ತಾನದ ಜೈಲುಗಳಲ್ಲಿ ಭಾರತದ ಯಾವುದೇ ಯುದ್ಧ ಖೈದಿಗಳಿಲ್ಲ ಎಂದು ಪಾಕಿಸ್ತಾನ ಅಧಿಕೃತವಾಗಿ ಘೋಷಿಸಿದೆ. ಈ ಬಗ್ಗೆ ಅನುಮಾನಗಳಿದ್ದರೆ, ಖೈದಿಗಳ ಸಂಬಂಧಿಗಳು ಪಾಕಿಸ್ತಾನಕ್ಕೆ ಭೇಟಿ ಕೊಟ್ಟು ಖುದ್ದು ಪರೀಕ್ಷೆ ನಡೆಸಬಹುದೆಂದು ಪಾಕ್ ಅಧ್ಯಕ್ಷ ಮುಷರ್ರಫ್ ತಿಳಿಸಿದ್ದಾರೆ.
ವಿದೇಶಾಂಗ ಸಚಿವಾಲಯದ ವಕ್ತಾರರೊಬ್ಬರು ಬುಧವಾರ ಈ ಕುರಿತು ಹೇಳಿಕೆಯನ್ನು ಹೊರಡಿಸಿದ್ದು , ಪಾಕಿಸ್ತಾನದ ಜೈಲುಗಳಲ್ಲಿ ಭಾರತದ ಯಾವುದೇ ಯುದ್ಧ ಖೈದಿಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಧ್ಯಕ್ಷ ಪರ್ವೇಜ್ ಮುಷರ್ರಫ್ ಅವರ ಸೂಚನೆಯ ಮೇರೆಗೆ ನಡೆಸಿರುವ ತನಿಖೆಯಲ್ಲಿ ಈ ವಿಷಯ ದೃಢೀಕರಣಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಆಗ್ರಾ ಶೃಂಗಸಭೆ ಸಂದರ್ಭದಲ್ಲಿ ಪಾಕಿಸ್ತಾನದ ಜೈಲುಗಳಲ್ಲಿರುವ ಭಾರತದ ಯುದ್ಧ ಖೈದಿಗಳನ್ನು ಬಿಡುಗಡೆ ಮಾಡುವಂತೆ ಪ್ರಧಾನಿ ವಾಜಪೇಯಿ ಅವರು ಮುಷರ್ರಫ್ ಅವರಲ್ಲಿ ಮನವಿ ಮಾಡಿದ್ದರು. 30 ವರ್ಷಗಳ ನಂತರವೂ ಯುದ್ಧ ಖೈದಿಗಳು ಪಾಕ್ ಜೈಲುಗಳಲ್ಲಿರುವ ಬಗೆಗೆ ಸಂಶಯ ವ್ಯಕ್ತಪಡಿಸಿದ್ದ ಮುಷರ್ರಫ್, ಈ ಕುರಿತು ಮತ್ತೊಮ್ಮೆ ತಾವೇ ಖುದ್ದು ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದ್ದರು.
ಪಾಕ್ ಜೊತೆ ಮಾತುಕತೆ ಮುಂದುವರಿಕೆ- ವಾಜಪೇಯಿ
ಪಾಕಿಸ್ತಾನದ ಜೊತೆಗಿನ ಮಾತುಕತೆಗಳನ್ನು ಮುಂದುವರಿಸುವುದಾಗಿ ಪ್ರಧಾನಿ ವಾಜಪೇಯಿ ಗುರುವಾರ ಪುನರುಚ್ಛರಿಸಿದ್ದಾರೆ. ಕಾಶ್ಮೀರ ಕೊಳ್ಳದಲ್ಲಿ ಹಿಂಸಾಚಾರ ಮುಂದುವರಿಯುತ್ತಿದ್ದರೂ, ತಾವು ಮಾತುಕತೆ ಪ್ರಯತ್ನಗಳನ್ನು ಮುಂದುವರಿಸುವುದಾಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications