Get Updates
Get notified of breaking news, exclusive insights, and must-see stories!

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಇತ್ಯರ್ಥಕ್ಕೆ ಸೋನಿಯಾ ಮಧ್ಯಸ್ಥಿಕೆ

ಮುಂಬೈ : ಹಲವು ವರ್ಷಗಳಿಂದ ಕುದಿಯುತ್ತಿರುವ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದವನ್ನು ಬಗೆಹರಿಸಲು ತಾವು ಮಧ್ಯ ಪ್ರವೇಶಿಸುವುದಾಗಿ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ತಿಳಿಸಿದ್ದಾರೆ.

ಈ ಎರಡೂ ರಾಜ್ಯಗಳ ನಡುವೆ ಸುಮಾರು ನಾಲ್ಕು ದಶಕಗಳಿಂದಲೂ ಮುಂದುವರಿದಿರುವ ಗಡಿ ವಿವಾದವನ್ನು ಇತ್ಯರ್ಥಪಡಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್‌ರಾವ್‌ ದೇಶ್‌ಮುಖ್‌ ಮಾಡಿಕೊಂಡ ಮನವಿಯ ಹಿನ್ನೆಲೆಯಲ್ಲಿ ಸೋನಿಯಾ ಈ ಅಭಯ ನೀಡಿದ್ದಾರೆ.

ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದ ದೇಶ್‌ಮುಖ್‌ ಗಡಿ ವಿವಾದ ಬಗೆಹರಿಸಲು ಮಹಾರಾಷ್ಟ್ರ ರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು.

ಈ ಎರಡೂ ರಾಜ್ಯಗಳ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್‌ 2ರಂದು ಪ್ರಧಾನಿ ವಾಜಪೇಯಿ ಅವರು ಕರೆದಿದ್ದ ಮುಖ್ಯಮಂತ್ರಿಗಳ ಸಭೆ ರದ್ದಾಗಿತ್ತು. ಕರ್ನಾಟಕದಲ್ಲಿ ಬರಪರಿಹಾರ ಕಾಮಗಾರಿ ಕೈಗೊಳ್ಳಬೇಕಿರುವ ಕಾರಣ ಈ ಸಭೆಯಲ್ಲಿ ಪಾಲ್ಗೊಳ್ಳಲಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಕೃಷ್ಣ ತಿಳಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ವಾರ್ತಾ ಸಂಚಯ:
ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+