ಎಸ್. ಎಂ. ಕೃಷ್ಣ ಸಂಪುಟ ಸದಸ್ಯರ ಖಾತೆಗಳಲ್ಲಿ ಬದಲಾವಣೆ
ಬೆಂಗಳೂರು : ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ತಮ್ಮ ಸಚಿವ ಸಂಪುಟದ ಇಬ್ಬರು ಮತ್ತು ಆರು ಮಂದಿ ರಾಜ್ಯ ಸಚಿವರ ಖಾತೆಯಲ್ಲಿ ಮಾರ್ಪಾಟು ಮಾಡಿದ್ದು ರಾಜ್ಯಪಾಲರಾದ ವಿ.ಎಸ್. ರಮಾದೇವಿಯವರು ಗುರುವಾರ ಈ ಕುರಿತ ಆದೇಶ ಹೊರಡಿಸಿದ್ದಾರೆ.
ವಾರ್ತಾ ಸಚಿವರಾಗಿದ್ದ ಪ್ರೊ.ಬಿ.ಕೆ. ಚಂದ್ರಶೇಖರ್ ಅವರು ಇನ್ನು ಮುಂದೆ ಮಾಹಿತಿ ತಂತ್ರಜ್ಞಾನ ಖಾತೆಯನ್ನು ನೋಡಿಕೊಳ್ಳಲಿದ್ದರೆ, ಹಣಕಾಸು ಖಾತೆ ರಾಜ್ಯ ಸಚಿವರಾಗಿದ್ದ ಎಂ.ಶಿವಣ್ಣ ಅವರು ವಾರ್ತಾ ಇಲಾಖೆ ನೋಡಿಕೊಳ್ಳಲಿದ್ದಾರೆ. ಹಣಕಾಸು ಖಾತೆ ಯನ್ನು ಮುಖ್ಯಮಂತ್ರಿ ತಮ್ಮ ಬಳಿಯೇ ಇಟ್ಟುಕೊಂಡಿದ್ದು, ಮಾಹಿತಿ ತಂತ್ರಜ್ಞಾನ ಸಚಿವರಾಗಿದ್ದ ಎಂ.ಎಂ.ನಾಣಯ್ಯ ಅವರಿಗೆ ಅಬ್ಕಾರಿ ಖಾತೆ ನೀಡಲಾಗಿದೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ.ಚಂದ್ರೇಗೌಡ ಅವರಿಗೆ ಹೆಚ್ಚುವರಿಯಾಗಿ ನಗರ ಮೂಲಭೂತ ಸೌಲಭ್ಯಗಳ ಇಲಾಖೆ ಹಾಗೂ ಹಣಕಾಸು ಅಭಿವೃದ್ಧಿ ನಿಗಮವನ್ನು , ನಗರಾಭಿವೃದ್ಧಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ಅವರಿಗೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಲಿ ಮತ್ತು ನಗರ ಯೋಜನಾ ಇಲಾಖೆಯನ್ನು ಹೆಚ್ಚುವರಿ ಯಾಗಿ ನೀಡಲಾಗಿದೆ.
ಯೋಜನಾ ಖಾತೆ ಸಚಿವರಾಗಿರುವ ಸುಮಾ ವಸಂತ್ಗೆ ಸಚಿವ ಬಾಬುರಾವ್ ಚಿಂಚನ ಸೂರ್ ಬಳಿ ಇದ್ದ ಮುಜರಾಯಿ ಇಲಾಖೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದ್ದರೆ, ಬಾಬುರಾವ್ ಚಿಂಚನ ಸೂರ್ ಬಳಿ ಸಣ್ಣ ಉಳಿತಾಯ, ಲಾಟರಿ ಹಾಗೂ ವಿಮೆ ಇಲಾಖೆಗಳ ಜವಾಬ್ದಾರಿ ಮಾತ್ರ ಉಳಿದುಕೊಂಡಿದೆ.
ಇಂಧನ ಖಾತೆ ರಾಜ್ಯ ಸಚಿವರಾಗಿದ್ದ ವೀರ ಕುಮಾರ್ ಪಾಟೀಲ್ ಅವರು ಆ ಖಾತೆಯನ್ನು ಸ್ವತಂತ್ರವಾಗಿ ನಿರ್ವಹಿಸಲಿದ್ದಾರೆ. ಅಲ್ಲದೆ ಆರು ಮಂದಿ ರಾಜ್ಯ ಸಚಿವರು ಇನ್ನು ಮುಂದೆ ಸ್ವತಂತ್ರವಾಗಿ ತಮ್ಮ ಖಾತೆಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications