ಮೈಸೂರು ವಿವಿಯಲ್ಲಿ ಕನ್ನಡದ ಕೊಲೆ: ದೇ.ಜವರೇಗೌಡ ಕಿಡಿ
ಬೆಂಗಳೂರು : ಮೈಸೂರು ವಿಶ್ವ ವಿದ್ಯಾಲಯದ ಪದವಿ ತರಗತಿಯಲ್ಲಿ ಕನ್ನಡವನ್ನು ಒಂದೇ ವರ್ಷಕ್ಕೆ ಸೀಮಿತಗೊಳಿಸುವುದನ್ನು ತೀವ್ರವಾಗಿ ವಿರೋಧಿಸಿರುವ ಮೈಸೂರು ವಿವಿಯ ಮಾಜಿ ಉಪಕುಲಪತಿ ದೇ. ಜವರೇಗೌಡರು, ಈಗಿನ ಉಪಕುಲಪತಿಗಳಾದ ಡಾ. ಎಸ್. ಎನ್. ಹೆಗ್ಡೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಅವರು ಶುಕ್ರವಾರ ಕನ್ನಡ ಚಳವಳಿ ಹೋರಾಟದಲ್ಲಿ 39 ವರ್ಷಗಳನ್ನು ಕಳೆದ ವಾಟಾಳ್ ನಾಗರಾಜ್ ಅವರಿಗೆ ಕನ್ನಡ ಚಳವಳಿ ವಾಟಾಳ್ ಅಭಿಮಾನಿಗಳ ಸಂಘ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಪದವಿಯಲ್ಲಿ ಎರಡು ವರ್ಷಗಳ ಕನ್ನಡ ಬೋಧನೆಯನ್ನು ಒಂದೇ ವರ್ಷಕ್ಕೆ ಸೀಮಿತಗೊಳಿಸುವ ಹೆಗ್ಡೆ ಅವರ ಇಚ್ಛೆ ಕನ್ನಡಕ್ಕೆ ಮಾರಕವಾದುದು ಎಂದು ಜವರೇಗೌಡ ಟೀಕಿಸಿದರು.
ಈಗಾಗಲೇ ಐಎಎಸ್ ಅಧಿಕಾರಿಗಳು ದೇಶವನ್ನು ಹಾಳು ಮಾಡಿದ್ದಾರೆ. ಕನ್ನಡದ ಬಗ್ಗೆ ಅವರೇನೂ ಆಸಕ್ತಿ ಉಳಿಸಿಕೊಂಡಿಲ್ಲ. ಕನ್ನಡ ಭಾಷೆಯನ್ನು ಉಳಿಸದ ಮಂತ್ರಿಗಳು, ಶಾಸಕರು ರಾಜೀನಾಮೆ ನೀಡಲಿ ಎಂದು ಜವರೇಗೌಡರು ಆಕ್ರೋಶ ವ್ಯಕ್ತಪಡಿಸಿದರು. ಸಮಾರಂಭದಲ್ಲಿ ವಾಟಾಳ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ. ಎನ್. ಬಸವಾರಾಧ್ಯ ಕನ್ನಡ ಚಳವಳಿ ಸಂಕೇತವಾಗಿ ಪಂಜನ್ನು ನೀಡಿ ಅಭಿನಂದಿಸಿದರು.
ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಹಿರಿಯ ಸ್ವಾತಂತ್ರ್ಯ ಯೋಧ ಎಚ್. ಎಸ್. ದೊರೆಸ್ವಾಮಿ, ಕವಿ ಹಾಗೂ ಮಾಜಿ ಶಾಸಕ ಸಿದ್ಧಲಿಂಗಯ್ಯ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
What do you think about this story ?
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications