ಜಂಬೂಸವಾರಿಗೆ ಕುಟುಕು ಜೀವ
ಮೈಸೂರು : ಪಂಜಿನ ಕವಾಯತು, ದಸರಾ ಚಲನಚಿತ್ರೋತ್ಸವ, ಕ್ರೀಡಾಕೂಟ ಹಾಗೂ ವಿಶ್ವವಿಖ್ಯಾತ ಜಂಬೂಸವಾರಿಯನ್ನು ಬರದ ಹಿನ್ನೆಲೆಯಲ್ಲಿ ಈ ಬಾರಿ ರದ್ದುಪಡಿಸಿರುವುದಾಗಿ ಹೇಳಿಕೆ ನೀಡಿದ್ದ ಸಚಿವೆ ರಾಣಿ ಸತೀಶ್ ತಮ್ಮ ಹೇಳಿಕೆಗೆ ತಾವೇ ತಿದ್ದುಪಡಿ ನೀಡಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ್ದ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಮುಖ್ಯಮಂತ್ರಿಗಳ ಆದೇಶಾನುಸಾರ ಈ ಬಾರಿ ಸ್ತಬ್ಧಚಿತ್ರ ಮೆರವಣಿಗೆ, ಜಂಬೂಸವಾರಿ, ವಸ್ತುಪ್ರದರ್ಶನ, ಪಂಜಿನ ಕವಾಯತು ರದ್ದುಪಡಿಸಲಾಗಿದೆ ಎಂದು ತಿಳಿಸಿದರು.
ಇದಾದ ಕೆಲ ಸಮಯದ ಬಳಿಕ ಮತ್ತೆ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಜಂಬೂಸವಾರಿ ರದ್ದು ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುವ ಉನ್ನತಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಒಂದೆರಡು ದಿನದಲ್ಲೇ ತೀರ್ಮಾನಿಸಲಾಗುವುದು ಎಂದರು.
ವಸ್ತು ಪ್ರದರ್ಶನ : ಇದರಿಂದಾಗಿ, ನಾಲ್ಕು ಶತಮಾನಗಳ ಸುದೀರ್ಘ ಇತಿಹಾಸದ ದಸರಾ ಉತ್ಸವದಲ್ಲಿ ಜಂಬೂಸವಾರಿ ನಡೆಯುವ ಆಸೆ ಜೀವಂತವಾಗಿದೆ. ಈ ಮಧ್ಯೆ ರಾಜ್ಯ ವಸ್ತು ಪ್ರದರ್ಶ ಪ್ರಾಧಿಕಾರದ ಅಧ್ಯಕ್ಷ ಎಸ್. ಪುಟ್ಟಸ್ವಾಮಿ ಅವರು, ದಸರಾ ವಸ್ತು ಪ್ರದರ್ಶನ ಶತಾಯಗತಾಯ ನಡೆದೇತೀರುತ್ತದೆ ಎಂದು ತಿಳಿಸಿದ್ದಾರೆ.
ವಸ್ತು ಪ್ರದರ್ಶನದ ಗುತ್ತಿಗೆಯನ್ನು ಈಗಾಗಲೇ 1.35 ಕೋಟಿ ರುಪಾಯಿಗೆ ನೀಡಲಾಗಿದೆ. ಅದಕ್ಕೆ ಸರಕಾರ ಮಂಜೂರಾತಿಯನ್ನೂ ನೀಡಿದೆ. ಪರಿಸ್ಥಿತಿ ಹೀಗಿರುವಾಗ ವಸ್ತುಪ್ರದರ್ಶನ ರದ್ದುಪಡಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications