ಜಮಖಂಡಿ ಸಕ್ಕರೆ ಕಾರ್ಖಾನೆ ದೇಶಕ್ಕರ್ಪಣೆ,ಸೋನಿಯಾ ತುಲಾಭಾರ ರದ್ದು
ಹಿರೇ ಪಡಸಲಗಿ : ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯೂಟಿಓ)ಯ ಹೆಸರಿನಲ್ಲಿ ಕೇಂದ್ರ ಸರ್ಕಾರ ರೈತರಿಗೆ ಅನ್ಯಾಯವೆಸಗುತ್ತಿದೆ. ಒಂದೆಡೆ ಸರ್ಕಾರಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳು ಕೊಳೆಯುತ್ತಿದ್ದರೆ, ಮತ್ತೊಂದೆಡೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ವಾಜಪೇಯಿ ಸರ್ಕಾರದ ಬೇಜವಾಬ್ದಾರಿತನವನ್ನು ಕಟುವಾಗಿ ಟೀಕಿಸಿದ್ದಾರೆ. ಈ ನಡುವೆ ಹಲವು ವಲಯಗಳಿಂದ ಕೇಳಿಬಂದ ಪ್ರಬಲ ವಿರೋಧದಿಂದ ಸೋನಿಯಾಗಾಂಧಿ ಅವರ ಬೆಳ್ಳಿ ತುಲಾಭಾರ ಕಾರ್ಯಕ್ರಮ ರದ್ದಾಗಿದೆ.
ಉತ್ತರ ಕರ್ನಾಟಕದ ಬಿಜಾಪುರ ಜಿಲ್ಲೆಯ ಜಮಖಂಡಿ ಸಕ್ಕರೆ ಕಾರ್ಖಾನೆಯನ್ನು ಸೋಮವಾರ ರಾಷ್ಟ್ರಕ್ಕೆ ಅರ್ಪಿಸಿದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಸೋನಿಯಾ ಮಾತನಾಡುತ್ತಿದ್ದರು. ಕೆಲವು ಬರಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟು ಸಂತ್ರಸ್ತರ ಸಮಸ್ಯೆಗಳನ್ನು ಸಾವಧಾನದಿಂದ ಆಲಿಸಿದ ಸೋನಿಯಾ ನೊಂದವರಿಗೆ ಸಾಂತ್ವನ ಹೇಳಿದರು. ಬರ ಪರಿಹಾರ ಕಾಮಗಾರಿಗಳಿಗೆ ಬಳಸಿಕೊಳ್ಳಲು 10 ಲಕ್ಷ ರುಪಾಯಿಗಳನ್ನು ಸೋನಿಯಾ ದೇಣಿಗೆ ನೀಡಿದರು.
ರಾಜ್ಯ ಸರ್ಕಾರದ ಕ್ರಮಗಳ ಬಗೆಗೆ ಮೇಡಂ ಮೆಚ್ಚುಗೆ
ಗೋಶಾಲೆಗೆ ಭೇಟಿ ನೀಡಿದ ಸೋನಿಯಾ, ಗುಡ್ಡಗಾಡು ಮಹಿಳೆಯರೊಂದಿಗೆ ಮಾತುಕತೆ ನಡೆಸಿದರು. ಕರ್ನಾಟಕದಲ್ಲಿನ ಬರ ಪರಿಸ್ಥಿತಿಯನ್ನು ಅರಿತುಕೊಳ್ಳಲು ಇಲ್ಲಿಗೆ ಆಗಮಿಸಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದ ಸೋನಿಯಾ, ರಾಜ್ಯ ಸರ್ಕಾರ ಕೈಗೊಂಡಿರುವ ಬರ ಪರಿಹಾರ ಕಾಮಗಾರಿಗಳ ಕುರಿತು ಸಂತಸ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿನ ಬರ ಪರಿಹಾರ ಸ್ಥಿತಿಯನ್ನು ನಿಭಾಯಿಸಲು ಕೇಂದ್ರದಿಂದ ಗರಿಷ್ಠ ಪ್ರಮಾಣದ ನೆರವು ದೊರೆಯುವಂತೆ ತಾವು ಶ್ರಮ ಮೀರಿ ಪ್ರಯತ್ನಿಸುವುದಾಗಿ ಸೋನಿಯಾ ಆಶ್ವಾಸನೆ ನೀಡಿದರು. ಬರದ ನಡುವೆಯೂ ಹಬ್ಬದ ವಾತಾವರಣ ಮೂಡಿದ್ದ ಹೊರಟ್ಟಿ ಗ್ರಾಮದಲ್ಲಿ ಸಾವಿರಾರು ಜನರು ಸಾಲಿನಲ್ಲಿ ನಿಂತು ಸೋನಿಯಾ ಅವರಿಗೆ ಸ್ವಾಗತ ಕೋರಿದರು. ಮುಖ್ಯಮಂತ್ರಿ ಎಸ್.ಎಂ.ಕೃಷ್ಣ , ಕೆಪಿಸಿಸಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ , ಹಾಗೂ ಸಂಪುಟದ ಸಚಿವರು, ಪಕ್ಷದ ಮುಖಂಡರು ಸೋನಿಯಾ ಭೇಟಿ ಸಂದರ್ಭದಲ್ಲಿ ಹಾಜರಿದ್ದರು.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications