ತೆಹಲ್ಕಾ ವಿರುದ್ಧ ಶ್ರೀನಿವಾಸಪ್ರಸಾದ್ರಿಂದ ಕ್ರಿಮಿನಲ್ ಮೊಕದ್ದಮೆ
ಬೆಂಗಳೂರು : ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ರಾಜ್ಯ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅವರು ಸೋಮವಾರ ತೆಹೆಲ್ಕಾ.ಕಾಂ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿದ್ದಾರೆ. ವಿವಾದಾತ್ಮಕ ರಕ್ಷಣಾ ಸಾಮಗ್ರಿ ಖರೀದಿ ಹಗರಣದಲ್ಲಿ ಅನವಶ್ಯಕವಾಗಿ ತಮ್ಮ ಹೆಸರನ್ನು ಎಳೆದಿರುವ ಡಾಟ್ಕಾಂ ಮಾನನಷ್ಟ ಉಂಟುಮಾಡಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಸಂಬಂಧ ಇಲ್ಲಿನ 8ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ವಿನಾಕಾರಣ ತಮ್ಮ ಹೆಸರನ್ನು ಈ ಹಗರಣದಲ್ಲಿ ಎಳೆದು, ತಮ್ಮ ತೇಜೋವಧೆ ಮಾಡಲಾಗಿದೆ ಎಂದಿರುವ ಅವರು, ತೆಹಲ್ಕಾ.ಕಾಂನ ಕಾರ್ಯನಿರ್ವಾಹಕ ಸಂಪಾದಕ ತರುಣ್ ಜೆ. ತೇಜ್ಪಾಲ್, ಅನಿರುದ್ಧ ಬಹಾಲ್, ಮಿಂಟಿ ಕುನ್ವರ್ ತೇಜ್ಪಾಲ್ ಹಾಗೂ ವರದಿಗಾರ ಮ್ಯಾಥ್ಯು ಸ್ಯಾಮ್ಯುಯಲ್ ಅವರನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ.
ಈ ಮೊಕದ್ದಮೆಯನ್ನು ದಾಖಲಿಸಿಕೊಂಡ ನ್ಯಾಯಾಧೀಶರಾದ ನ್ಯಾಯಮೂರ್ತಿ ರವೀಂದ್ರ ಜೆ. ವೈದ್ಯ ಅವರು, ಸೋಮವಾರ ಮಧ್ಯಾಹ್ನ ನ್ಯಾಯಾಲಯದಲ್ಲಿ ಹಾಜರಾಗಿ ಖುದ್ದು ಹೇಳಿಕೆ ನೀಡುವಂತೆ ಶ್ರೀನಿವಾಸ ಪ್ರಸಾದ್ ಅವರಿಗೆ ಸೂಚಿಸಿದರು.
ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ಆಗಮಿಸಿದ ಪ್ರಸಾದ್ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಸದ್ಯಕ್ಕೆ ಮೊಕದ್ದಮೆಯನ್ನಷ್ಟೇ ದಾಖಲಿಸಲಾಗಿದೆ. ಎಷ್ಟು ಪರಿಹಾರ ಕೇಳಬೇಕು ಎಂಬುದನ್ನು ತಮ್ಮ ವಕೀಲರಾದ ಎಂ.ಎನ್. ನೆಹರು ಹಾಗೂ ಕೆ. ದಿವಾಕರ್ ಅವರು ನಿರ್ಧರಿಸುವರು ಎಂದರು.
ಹಗರಣ ಬಯಲಾದ ಸಂದರ್ಭದಲ್ಲಿ ತಾವು ಬೆಂಗಳೂರಿನಲ್ಲಿಯೇ ಇದ್ದ ಕಾರಣ ಮೊಕದ್ದಮೆಯನ್ನು ಬೆಂಗಳೂರು ನ್ಯಾಯಾಲಯದಲ್ಲೇ ಹೂಡಲಾಗಿದೆ. ಅನಾವಶ್ಯಕವಾಗಿ ಈ ಹಗರಣದಲ್ಲಿ ತಮ್ಮ ಹೆಸರನ್ನು ತಂದ ಡಾಟ್ ಕಾಂಗೆ ಕಾನೂನಿನ ರೀತ್ಯ ನೊಟಿಸ್ ನೀಡಿದ್ದರೂ ಅದು ಕ್ಷಮಾಪಣೆ ಕೋರದ ಕಾರಣ 6 ತಿಂಗಳ ತರುವಾಯ ಮೊಕದ್ದಮೆ ಹೂಡಲಾಯಿತು ಎಂದು ಸಮತಾ ಪಕ್ಷದ ನಾಯಕ ಶ್ರೀನಿವಾಸ ಪ್ರಸಾದ್ ವಿವರಿಸಿದರು.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications