ತೆಂಡೂಲ್ಕರ್ ಸೇರ್ಪಡೆಯಿಂದ ತಂಡದ ಇಮೇಜ್ ಬದಲಾಗಿದೆ-ಗಂಗೂಲಿ
ಕೋಲ್ಕತಾ : ಸಚಿನ್ ತೆಂಡೂಲ್ಕರ್ ತಂಡಕ್ಕೆ ಮರಳಿರುವುದರಿಂದ ತಂಡದ ನೈತಿಕ ಸ್ಫೂರ್ತಿ ಮರಳಿದೆ ಹಾಗೂ ತಂಡ ಮತ್ತಷ್ಟು ಬಲಶಾಲಿಯಾಗಿದೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.
ತೆಂಡೂಲ್ಕರ್ ವಾಪಸ್ಸಾಗುವುದರೊಂದಿಗೆ ಇಡೀ ತಂಡದ ಇಮೇಜು ಬದಲಾಗಿದೆ. ತಂಡ ತನ್ನ ಅತ್ಯುತ್ತಮ ಸಾಧನೆಯನ್ನು ದಕ್ಷಿಣ ಆಫ್ರಿಕಾದಲ್ಲಿ ತೋರಲಿದೆ ಎಂದು ಗಂಗೂಲಿ ಪಿಟಿಐಗೆ ತಿಳಿಸಿದ್ದಾರೆ. ಮೈದಾನದಲ್ಲಿ ತಮ್ಮ ನಡವಳಿಕೆಗಳಿಂದ ಪಂದ್ಯದ ರೆಫರಿಗಳಿಗೆ ಕಿರಿಕಿರಿಯಾಗುವ ಕುರಿತಾದ ಪ್ರಶ್ನೆಗಳಿಗೆ ಉತ್ತರಿಸಿದ ಗಂಗೂಲಿ- ತಂಡದ ನಾಯಕ ಕೆಲವು ಭಾವನೆಗಳನ್ನು ತೋರುವುದು ಅಗತ್ಯ. ಇಲ್ಲದೆ ಹೋದಲ್ಲಿ ಎಲ್ಲ ಪ್ರಯತ್ನಗಳು ವ್ಯರ್ಥವಾಗುತ್ತವೆ ಎಂದು ಗಂಗೂಲಿ ಹೇಳಿದರು.
ತಾವಿನ್ನೂ ಹೊಟ್ಟೆಯ ನೋವಿನಿಂದ ಸಂಪೂರ್ಣ ಗುಣಮುಖವಾಗಿಲ್ಲ ಎಂದು ಹೇಳಿದ ಗಂಗೂಲಿ, ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆಗೆ ಸಂಪೂರ್ಣ ಗುಣಮುಖವಾಗುವ ವಿಶ್ವಾಸ ವ್ಯಕ್ತಪಡಿಸಿದರು. ಬುಲವಾಯೋ, ಢಾಕಾ ಹಾಗೂ ಕ್ಯಾಂಡಿಗಳಲ್ಲಿನ ಟೆಸ್ಟ್ಗಳಲ್ಲಿ ತಮ್ಮ ನೇತೃತ್ವದಲ್ಲಿ ತಂಡ ಸಾಧಿಸಿದ ಸಾಗರೋತ್ತರ ಗೆಲುವುಗಳನ್ನು ಪ್ರಸ್ತಾಪಿಸಿ, ಒಂದೇ ವರ್ಷದ ಅವಧಿಯಲ್ಲಿ ಈ ಮೂರೂ ಯಶಸ್ಸುಗಳು ತಂಡಕ್ಕೆ ಮುಖ್ಯವಾಗುತ್ತವೆ ಎಂದು ಹೇಳುವ ಮೂಲಕ ತಮ್ಮ ನಾಯಕತ್ವ ವೈಫಲ್ಯದ ಟೀಕೆಗಳನ್ನು ತಳ್ಳಿಹಾಕಿದರು.
ದಕ್ಷಿಣ ಆಫ್ರಿಕಾ ಬಲಿಷ್ಠ ತಂಡವೆನ್ನುವುದರಲ್ಲಿ ಎರಡು ಮಾತಿಲ್ಲ . ಆದರೆ ನಾವು ನಮ್ಮ ಸಂಪೂರ್ಣ ಬಲದೊಂದಿಗೆ ತೆರಳುತ್ತಿರುವುದರಿಂದ ಉತ್ತಮ ಸಾಧನೆಯನ್ನು ನಿರೀಕ್ಷಿಸಿದ್ದೇನೆ ಎಂದು ಗಂಗೂಲಿ ಹೇಳಿದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications