ಇಸ್ರೇಲ್ನಿಂದ ಈಜಿಪ್ಟ್, ಜೋರ್ಡಾನ್ ಗಡಿ ಬಂದ್, ಕಟ್ಟೆಚ್ಚರ
ಜೆರುಸೆಲೆಮ್: ಅಮೆರಿಕದ ಮೇಲೆ ಭಯೋತ್ಪಾದಕ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಈಜಿಪ್ಟ್ ಮತ್ತು ಜೋರ್ಡಾನ್ ಗಡಿಗಳನ್ನು ಇಸ್ರೇಲ್ ಮುಚ್ಚಿದೆ ಎಂದು ಇಸ್ರೇಲಿ ಸಾರ್ವಜನಿಕ ಟೆಲಿವಿಷನ್ ವರದಿ ಮಾಡಿದೆ.
ಅಮೆರಿಕದ ವಿಶ್ವ ವ್ಯಾಪಾರ ಕೇಂದ್ರ ಸಹಿತ ಅವಳಿ ಕಟ್ಟಡಗಳ ಮೇಲೆ ಅಪಹೃತ ವಿಮಾನಗಳಿಂದ ನಡೆದ ದಾಳಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11ರಂದು ಇಸ್ರೇಲ್ ಪ್ರಧಾನಿ ಏರಿಯಲ್ ಶರೂನ್ ಕರೆದಿದ್ದ ತುರ್ತು ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಇದಕ್ಕೂ ಮುನ್ನ ಇಸ್ರೇಲ್ 24 ಗಂಟೆಗಳ ಅವಧಿಗೆ ವಿದೇಶಗಳಿಂದ ದೇಶಕ್ಕೆ ಬರುವ ವಿಮಾನ ಯಾನ ಪ್ರದೇಶವನ್ನು ಮುಚ್ಚಿರುವುದಾಗಿ ಘೋಷಿಸಿತ್ತು. ವಾಯುಪಡೆ ದೇಶದ ಸುತ್ತ ಕಟ್ಟೆಚ್ಚರ ವಹಿಸಿ ಕಾವಲು ಕಾಯುತ್ತಿದೆ. ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಶಿಮನ್ ಪೆರೆಸ್ ಅವರು ಅಮೆರಿಕೆಯಲ್ಲಿ ನಡೆದಿರುವ ಈ ದುರ್ಘಟನೆ ಅಣುಬಾಂಬ್ ದಾಳಿಗೆ ಸಮನಾಗಿದೆ ಎಂದು ಬಣ್ಣಿಸಿದ್ದಾರೆಂದು ಟೆಲಿವಿಷನ್ ವರದಿ ತಿಳಿಸಿದೆ.
ಇಸ್ರೇಲ್ ಸರಕಾರವು ಅಮೆರಿಕದಲ್ಲಿ ನಡೆದ ದುರಂತದ ಹಿನ್ನೆಲೆಯಲ್ಲಿ ಒಂದು ದಿನದ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದೆ. ಎಲ್ಲ ಸರಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸುವಂತೆ ಆದೇಶಿಸಲಾಗಿದೆ ಎಂದು ಸಾರ್ವಜನಿಕ ರೇಡಿಯೋ ವರದಿ ತಿಳಿಸಿದೆ.
(ಪಿ.ಟಿ.ಐ /ಎಎಫ್ಪಿ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications