10 ಉಗ್ರರ ಬಂಧನ ಮತ್ತೊಂದು ವಾಯು ದಾಳಿ ಯತ್ನ ವಿಫಲ
ನ್ಯೂಯಾರ್ಕ್ : ಕರಾಳ ಮಂಗಳವಾರ ಅಮೆರಿಕಾ ಮೇಲೆ ವಾಯುದಾಳಿ ನಡೆದ 2 ದಿನಗಳ ಒಳಗೇ ಇದೇ ಮಾದರಿಯ ಮತ್ತೊಂದು ವೈಮಾನಿಕ ದಾಳಿ ಪ್ರಯತ್ನವನ್ನು ಅಮೆರಿಕ ಭದ್ರತಾಪಡೆ ವಿಫಲಗೊಳಿಸಿದೆ. ಈ ಸಂಬಂಧ 10 ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ.
ನಕಲಿ ಪರಿಚಯಪತ್ರ, ಗುರುತುಚೀಟಿ, ನಕಲಿ ವಿಮಾನ ಚಾಲನೆ ಪರವಾನಗಿ ಮತ್ತು ಚಾಕುಹೊಂದಿದ್ದ 10 ಜನರನ್ನು ಜಾನ್ ಎಫ್ ಕೆನಡಿ ಮತ್ತು ಲಾಗಾರ್ಡಿಯಾ ವಿಮಾನ ನಿಲ್ದಾಣಗಳಲ್ಲಿ ಗುರುವಾರ ಸಂಜೆ ಬಂಧಿಸಲಾಗಿದೆ. ಇವರು, ಮತ್ತೊಂದು ವಿಮಾನ ಅಪಹರಿಸಿ, ದಾಳಿ ನಡೆಸಲು ಯೋಜಿಸಿದ್ದರು ಎಂದು ಪೊಲೀಸರು ಶಂಕಿಸಿದ್ದಾರೆ.
ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣದಿಂದ ಲಾಸ್ ಏಂಜಲೀಸ್ನತ್ತ ಹೊರಡಬೇಕಿದ್ದ ವಿಮಾನದಲ್ಲಿ ಆಸೀನರಾಗಿದ್ದ ಎಲ್ಲ ಪ್ರಯಾಣಿಕರನ್ನು ಆಮೂಲಾಗ್ರವಾಗಿ ತಪಾಸಣೆ ಮಾಡುತ್ತಿದ್ದಾಗ ನಾಲ್ವರು ಶಂಕಿತ ಉಗ್ರರು ಸಿಕ್ಕಿಬಿದ್ದರು. ಈ ಹಿನ್ನೆಲೆಯಲ್ಲಿ ಈ ಎರಡೂ ವಿಮಾನ ನಿಲ್ದಾಣಗಳನ್ನು ಮತ್ತೆ ಕಾರ್ಯಾರಂಭ ಮಾಡಿದ ಕೆಲವೇ ಹೊತ್ತಿನಲ್ಲಿ ಮುಚ್ಚಲಾಯಿತು.
ಈ ಘಟನೆಯ ಬಗ್ಗೆ ಟೆಲಿವಿಷನ್ಗೆ ಸಂದರ್ಶನ ನೀಡಿರುವ ಪ್ರಯಾಣಿಕರೊಬ್ಬರು ಉಗ್ರರು ವಿಮಾನ ಹಾರಲಿ ಎಂದು ಕಾಯುತ್ತಿದ್ದರು, ಆದರೆ, ಅಷ್ಟುಹೊತ್ತಿಗೆ ಅವರು ಸಿಕ್ಕಿಬಿದ್ದರು ಎಂದು ತಿಳಿಸಿದ್ದಾರೆ. ಈ ಘಟನೆಯಿಂದ ಪ್ರಯಾಣಿಕರು ಮತ್ತಷ್ಟು ಆತಂಕಕ್ಕೆ ಒಳಗಾದರಾದರೂ, ವಿಮಾನ ಹಾರಾಟಕ್ಕೆ ಮೊದಲೇ ಉಗ್ರರು ಸಿಕ್ಕಿಬಿದ್ದ ಬಗ್ಗೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಬಂಧಿತ ಶಂಕಿತ ಉಗ್ರರನ್ನು ವಿಚಾರಣೆಗೆ ಗುರಿಪಡಿಸಲಾಗಿದ್ದು, ಪೊಲೀಸರು ಈ ಸಂಬಂಧ ಯಾವುದೇ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ. ಆದರೆ, ಅವರ ಉದ್ದೇಶ ಮತ್ತೊಂದು ವಾಯು ದಾಳಿಯಾಗಿದ್ದಿರಬಹುದು ಎಂದು ಅವರು ಹೇಳಿದ್ದಾರೆ.
ಅಮೆರಿಕಾ ತಾಕೀತು : ಅಮೆರಿಕದ ಮೇಲೆ ನಡೆದಿರುವ ದಾಳಿ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಪತ್ತೆಗೆ ಸಂಪೂರ್ಣ ನೆರವು ನೀಡುವುದಾಗಿ ಪಾಕಿಸ್ತಾನ ತಿಳಿಸಿದ್ದಾಗ್ಯೂ, ವಾಯು ನೆಲೆ ಸ್ಥಾಪಿಸುವ ಅಮೆರಿಕದ ಕೋರಿಕೆಯ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಕಾಲಾವಕಾಶ ಕೋರಿದೆ. ಈ ಮಧ್ಯೆ ಅಮೆರಿಕವು ಆಫ್ಘಾನಿಸ್ತಾನ ಗಡಿ ಮುಚ್ಚವಂತೆ ಪಾಕ್ಗೆ ತಾಕೀತು ಮಾಡಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications