ಕಾವೇರಿ : ಶನಿವಾರ ಕರ್ನಾಟಕ ನಿಯೋಗದಿಂದ ಪ್ರಧಾನಿ ಭೇಟಿ
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಕೃಷ್ಣ ನೇತೃತ್ವದ ಸರ್ವಪಕ್ಷ ನಿಯೋಗ ಶನಿವಾರ ಸಂಜೆ 4.30ಕ್ಕೆ ದೆಹಲಿಯಲ್ಲಿ ಪ್ರಧಾನಿ ವಾಜಪೇಯಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದೆ. ಮಳೆಯಿಲ್ಲದೆ ಕರ್ನಾಟಕವೇ ನೀರಿನ ಕೊರತೆ ಅನುಭವಿಸುತ್ತಿರುವುದರಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂಬ ಅಂಶವನ್ನು ಪ್ರಧಾನಿ ಅವರಿಗೆ ಮನವರಿಕೆ ಮಾಡಿಕೊಡಲಿದೆ.
ಕರ್ನಾಟಕದ ಜಲಾಶಯಗಳಲ್ಲಿ ಪ್ರಸಕ್ತ ಇರುವ ನೀರಿನ ಪ್ರಮಾಣ ಎಷ್ಟು, ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಎಷ್ಟು ನೀರಿನ ಅಗತ್ಯ ಇದೆ. ಬರದಿಂದ ರಾಜ್ಯದಲ್ಲಿ ಉಂಟಾಗಿರುವ ನೀರಿನ ಅಭಾವ ಹಾಗೂ ತಮಿಳುನಾಡಿಗೆ ಏಕೆ ನೀರು ಬಿಡಲಾಗುತ್ತಿಲ್ಲ ಎಂಬ ಎಲ್ಲಾ ವಿವರಗಳನ್ನೂ ಈ ನಿಯೋಗ ಕೇಂದ್ರಕ್ಕೆ ವಿವರಿಸಲಿದೆ.
ಸಂಜೆ 6-30ಕ್ಕೆ ರಾಷ್ಟ್ರಪತಿ ನಾರಾಯಣನ್ ಅವರನ್ನೂ ಭೇಟಿ ಮಾಡಿ, ನಿಯೋಗ ರಾಜ್ಯದ ಅಸಹಾಯಕತೆ ವಿವರಿಸಲಿದೆ. ಶುಕ್ರವಾರ ಸಂಜೆ ದೆಹಲಿಗೆ ಪ್ರಯಾಣ ಬೆಳಸಲಿದೆ. ನಿಯೋಗದಲ್ಲಿ ಸಚಿವರಾದ ಎಚ್.ಸಿ. ಶ್ರೀಕಂಠಯ್ಯ, ವಿರೋಧ ಪಕ್ಷದ ನಾಯಕ ಕೆ.ಎಚ್. ಶ್ರೀನಿವಾಸ್, ಸದಾನಂದಗೌಡ, ಚೆನ್ನಿಗಪ್ಪ, ಬಸವರಾಜ ಹೊರಟ್ಟಿ, ಸೋಮಶೇಖರ್, ವೆಂಕಟರಾವ್, ಭಕ್ತವತ್ಸಲಂ, ಮಾಜಿ ಸಚಿವ ನಾಣಯ್ಯ, ಸೂರ್ಯನಾರಾಯಣರಾವ್ ಮೊದಲಾದವರು ಇದ್ದಾರೆ.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications