ಭಾರತ ವಾಸಿಗಳೇ ಕಠಿಣ ದಿನಗಳನ್ನು ಎದುರಿಸಲು ಸಜ್ಜಾಗಿ : ಅಟಲ್
ನವದೆಹಲಿ : ಅಮೆರಿಕ ಮೇಲಿನ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಕಠಿಣ ದಿನಗಳನ್ನು ಎದುರಿಸಲು ಸಜ್ಜಾಗುವಂತೆ ದೇಶದ ಜನತೆಗೆ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕರೆ ನೀಡಿದ್ದಾರೆ. ಆರ್ಥಿಕ ಹಿನ್ನಡೆಯಿಂದ ಉಂಟಾಗಿರುವ ಗಾಯದ ಮೇಲೆ ಅಮೆರಿಕ ಮೇಲಿನ ದಾಳಿ ಬರೆ ಹಾಕಿದೆ. ಇದರಿಂದ ವಿಶ್ವ ಆರ್ಥಿಕತೆಯ ಮೇಲೆ ಪರಿಣಾಮ ಉಂಟಾಗಲಿದೆ ಎಂದು ಅವರು ಹೇಳಿದ್ದಾರೆ.
ಅಮೆರಿಕದ ಮೇಲೆ ಸೆಪ್ಟೆಂಬರ್ 11ರಂದು ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ದೂರದರ್ಶನದ ಮೂಲಕ ರಾಷ್ಟ್ರವನ್ನುದ್ದೇಶಿಸಿ ಪ್ರಸಾರ ಭಾಷಣ ಮಾಡಿದ ಅವರು, ಈ ದುರ್ಘಟನೆಯಲ್ಲಿ ತಮ್ಮ ಜೀವ ಕಳೆದುಕೊಂಡವರ ಆತ್ಮಕ್ಕೆ ಈಶ್ವರನು ಶಾಂತಿ ನೀಡಲಿ ಎಂದು ಪ್ರಾರ್ಥಿಸಿದರು.
ಭಾರತ ಕಳೆದ ಕೆಲವು ದಶಕಗಳಿಂದಲೂ ಭಯೋತ್ಪಾದನೆಯನ್ನು ಎದುರಿಸುತ್ತಲೇ ಇದೆ. ಜಮ್ಮು -ಕಾಶ್ಮೀರದಲ್ಲಿ ಅಮಾಯಕರ ಹತ್ಯೆ ಅವ್ಯಾಹತವಾಗಿ ನಡೆಯುತ್ತಲೇ ಇದೆ. ಈಗ ಭಯೋತ್ಪಾದಕರು ಅಮೆರಿಕದ ಮೇಲೂ ದಾಳಿ ಮಾಡಿದ್ದಾರೆ.
ಭಯೋತ್ಪಾದನೆ ಎಂಬುದು ಯಾವುದೇ ದೇಶಕ್ಕಾದರೂ ಅತಿ ದೊಡ್ಡ ಶತ್ರು. ವಿಶ್ವ ಸಮುದಾಯ ಸಂಘಟಿತವಾಗಿ ಅಂತಾರಾಷ್ಟ್ರೀಯ ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸಬೇಕು. ಭಾರತವು ಈ ಅಂಶವನ್ನು ಹಲವು ವರ್ಷಗಳಿಂದ ಪ್ರತಿಪಾದಿಸುತ್ತಲೇ ಬಂದಿದೆ ಎಂದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದಾರೆ.
ಅಮೆರಿಕದ ಜನತೆಯ ಕಷ್ಟಸುಖದಲ್ಲಿ ನಾವೂ ಭಾಗಿಗಳು, ಸಮಸ್ತ ಭಾರತೀಯರು ಅಮೆರಿಕದ ಜತೆಗಿದ್ದೇವೆ ಎಂದ ಅವರು, ಗಡಿಯಾಚೆಯ ಭಯೋತ್ಪಾದನೆ ಹತ್ತಿಕ್ಕಲು ವಿಶ್ವವೇ ಒಂದಾಗಬೇಕು ಎಂದು ಕರೆ ನೀಡಿದರು. ಅಮೆರಿಕದಲ್ಲಿ ಈಹೊತ್ತು ನಡೆದಿರುವ ದುರ್ಘಟನೆ ನಮಗೂ ಒಂದು ನೇರ ಪಾಠವಾಗಿದೆ ಎಂದರು.
ಈ ಪರಿಸ್ಥಿತಿಯಲ್ಲಿ ಇಡೀ ರಾಷ್ಟ್ರವೇ ಎಚ್ಚರದಿಂದಿರಬೇಕು. ದೇಶದ ಜನತೆ ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಸರಕಾರಕ್ಕೆ ಸಹಕರಿಸಬೇಕು. ಅಮೆರಿಕದಲ್ಲಿ ನಡೆದಿರುವ ಘಟನಾವಳಿಗಳಿಂದ ದೇಶದ ಆರ್ಥಿಕತೆಯ ಮೇಲೂ ಒತ್ತಡ ಉಂಟಾಗಲಿದೆ. ಮುಂದಿನ ದಿನಗಳಲ್ಲಿ ನಾವು ಕಠಿಣ ಹಾಗೂ ನಿಷ್ಠುರ ನಿಲುವು ತಳೆಯಬೇಕಾದೀತು ಎಂದರು.
ತೈಲ ಬೆಲೆಗಳ ಮೇಲೂ ಈ ದಾಳಿಯ ದುಷ್ಪರಿಣಾಮ ಬೀರಿದೆ. ನೇರ ಬಂಡವಾಳ ಹೂಡಿಕೆಯ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂದರು. ಮುಂಬೈನಲ್ಲಿ ಕೂಡ ಸರಣಿ ಬಾಂಬ್ ಸ್ಫೋಟ ನಡೆದಿತ್ತು. ಆಗಿಲೂ ದೇಶ ಭಯೋತ್ಪಾದನೆ ವಿರುದ್ಧ ಸಂಘಟಿತ ಹೋರಾಟಕ್ಕೆ ಕರೆ ನೀಡಿತ್ತು. ಈಗಲೂ ನಾವು ಅದನ್ನೇ ಪ್ರತಿಪಾದಿಸುತ್ತೇವೆ. ವಿಶ್ವ ಒಂದಾಗಿ ಹೋರಾಡಿದರೆ ಭಯೋತ್ಪಾದನೆ ಹತ್ತಿಕ್ಕಲು ಸಾಧ್ಯ ಎಂದರು.
ಭಾರತವು 90 ಸಾವಿರ ಕೋಟಿ ರುಪಾಯಿಗಳನ್ನು ತೈಲ ಆಮದಿಗಾಗಿ ವ್ಯಯಿಸುತ್ತಿದೆ. ಬ್ಯಾರಲ್ಗೆ ಒಂದು ಡಾಲರ್ ಹೆಚ್ಚಳವಾದರೂ ಅದು ನಮ್ಮ ಆಮದು ವೆಚ್ಚಕ್ಕೆ 3,600 ಕೋಟಿ ರುಪಾಯಿಗಳ ಹೊರೆಯನ್ನು ಉಂಟು ಮಾಡಲಿದೆ ಎಂದರು.
ಖಂಡನೆ : ಭಯೋತ್ಪಾದಕರಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ನೆರವಾಗುತ್ತಿರುವ ರಾಷ್ಟ್ರದ ಕ್ರಮವನ್ನು ಅವರು ಖಂಡಿಸಿದರು. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತೊಗೆಯಲು ಇಡೀ ವಿಶ್ವವೇ ಒಂದಾಗಬೇಕು ಎಂದು ಅವರು ಪುನರುಚ್ಚರಿಸಿದರು.
(ಪಿ.ಟಿ.ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications