‘ನಮ್ಮದು ಅಲಿಪ್ತ ನೀತಿಯ ರಾಷ್ಟ್ರ ಎಂಬುದನ್ನು ಸರಕಾರ ಮರೆತರೆ ಒಳಿತಾಗದು’
ನವದೆಹಲಿ : ವಿದೇಶಗಳಿಗೆ ಯಾವುದೇ ರೀತಿಯ ಮಿಲಿಟರಿ ನೆರವು ನೀಡುವುದು ಭಾರತಕ್ಕೆ ಶ್ರೇಯಸ್ಸಲ್ಲ. ನಮ್ಮದು ಅಲಿಪ್ತ ನೀತಿಯನ್ನು ಅನುಸರಿಸುವ ರಾಷ್ಟ್ರ ಎಂಬುದನ್ನು ಸರಕಾರ ಮರೆತಂತಿದೆ. ಸರಕಾರ ರಾಷ್ಟ್ರದ ಮೂಲಭೂತ ತತ್ವಗಳನ್ನೇ ಬದಲಿಸಲು ಹೊರಟಿದ್ದರೆ, ಆಗ ದೇಶದ ಆಂತರಿಕ ಶಾಂತಿಯೇ ಕದಡಿಹೋಗುವ ಸಂಭವವಿದೆ.ಆದ್ದರಿಂದ ಸರಕಾರ ಎಚ್ಚರಿದಿಂದಿರಬೇಕು ಎಂದು ಕಾಂಗ್ರೆಸ್ ನಾಯಕ ಕೆ. ನಟ್ವರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಹಿಂದೆ ವಿದೇಶಾಂಗ ಖಾತೆಗಳ ರಾಜ್ಯಸಚಿವರಾಗಿದ್ದ ಕೆ. ನಟ್ವರ್ ಸಿಂಗ್, ಅಫ್ಘನಿಸ್ತಾನ್ ಮೇಲೆ ದಾಳಿ ನಡೆಸಲಿರುವ ಅಮೆರಿಕಾಕ್ಕೆ ನೆರವಾಗಲು ಭಾರತ ಇಚ್ಚಿಸಿರುವ ಬಗೆಗೆ ಪ್ರತಿಕ್ರಿಯಿಸುತ್ತಿದ್ದರು. ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ, ಅದರಲ್ಲಿಯೂ ವಿದೇಶಾಂಗ ವ್ಯವಹಾರಗಳ ಸಚಿವ ಜಸ್ವಂತ್ ಸಿಂಗ್ ಮತ್ತು ಅವರ ಸಲಹಾಕಾರ ಅರುಣ್ ಸಿಂಗ್ , ಅಮೆರಿಕಾಕ್ಕೆ ನೆರವಾಗಲು ಮುಂದಾಗಿದ್ದಾರೆ. ಆದರೆ ನಾವು ಅಲಿಪ್ತ ನೀತಿಯನ್ನು ಅನುಸರಿಸುವವರು ಎಂಬುದನ್ನು ಮರೆತಲ್ಲಿ ಕಾಂಗ್ರೆಸ್ ಪಕ್ಷ ಸರಕಾರದ ವಿದೇಶಾಂಗ ನೀತಿಯ ಬಗ್ಗೆ ತೀವ್ರ ಭಿನ್ನಾಭಿಪ್ರಾಯ ವ್ಯಕ್ತಪಡಿಸಲಿದೆ.
ಎಲ್ಲ ಪಕ್ಷಗಳಂತೆ ಕಾಂಗ್ರೆಸ್ ಕೂಡ ಭಯೋತ್ಪಾದನೆಯನ್ನು ವಿರೋಧಿಸುತ್ತದೆ. ಭಾರತವೂ ಹಿಂದೆ ಪಂಜಾಬ್ನಲ್ಲಿ , ಈಗ ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಎದುರಿಸುತ್ತಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಸರಕಾರ ರಾಷ್ಟ್ರೀಯ ಹಿತಾಸಕ್ತಿಯನ್ನು ಮರೆತು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ . ಜಾಣತನದಿಂದ ವರ್ತಿಸಬೇಕಾಗಿದೆ ಎಂದು ನಟ್ವರ್ ಸರಕಾರಕ್ಕೆ ಕಿವಿಮಾತು ಹೇಳಿದ್ದಾರೆ.
(ಇನ್ಫೋ ವಾರ್ತೆ)
Post Your Views
ಮುಖಪುಟ / ಭಯೋತ್ಪಾದನೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications