‘ಅಮೆರಿಕಕ್ಕೆ ಬೆಂಬಲ! ಆದರೆ,ಯುದ್ಧ ಚಟುವಟಿಕೆಗಳಿಂದ ದೂರವಿರೋಣ’
ಶಿರಸಿ : ಭಯೋತ್ಪಾದಕತೆಯನ್ನು ಹತ್ತಿಕ್ಕುವ ಅಮೇರಿಕದ ಕ್ರಮಕ್ಕೆ ಬಲವಾಗಿ ನಿಂತಿರುವ ಕೇಂದ್ರ ಸರ್ಕಾರದ ನಿಲುವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಬೆಂಬಲಿಸಿದೆ.
ಗೋಕರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವಿಎಚ್ಪಿ ಅಧ್ಯಕ್ಷ ಅಶೋಕ್ ಸಿಂಘಾಲ್ ಈ ವಿಷಯ ತಿಳಿಸಿದರು. ಆದರೆ, ಯುದ್ಧರಂಗವಾಗಿ ಭಾರತವನ್ನು ಬಳಸಿಕೊಳ್ಳಲು ಅವಕಾಶ ನೀಡದಂತೆ ಕೇಂದ್ರ ಸರ್ಕಾರವನ್ನು ಸಿಂಘಾಲ್ ಒತ್ತಾಯಿಸಿದರು.
ಭಯೋತ್ಪಾದಕರಿಂದ ನರಳುತ್ತಿರುವ ಈ ಸಂದರ್ಭದಲ್ಲಿ ಅಮೆರಿಕವನ್ನು ಬೆಂಬಲಿಸುವುದು ಅನಿವಾರ್ಯವಾಗಿದೆ. ಆದರೆ, ತನ್ನೆಲ್ಲ ಅತ್ಯಾಧುನಿಕ ಉಪಕರಣಗಳನ್ನು ಬಳಸಿಯೂ ಅಮೆರಿಕ ಭಯೋತ್ಪಾದಕತೆಯನ್ನು ಹತ್ತಿಕ್ಕುವಲ್ಲಿ ಸಂಪೂರ್ಣ ಯಶಸ್ಸು ಗಳಿಸುವುದು ಸಾಧ್ಯವಿಲ್ಲ . ಇಂಥ ಸಂದರ್ಭದಲ್ಲಿ ಭಾರತ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಸಿಂಘಾಲ್ ಹೇಳಿದರು.
ಭಾರತಕ್ಕೆ ವಿದೇಶಿಯರ ಆಗಮನ ಹಾಗೂ ನಿರ್ಗಮನದ ಚಟುವಟಿಕೆಗಳನ್ನು ಗಮನಿಸಲು ಪ್ರತ್ಯೇಕವಾದ ವಿಭಾಗವೊಂದನ್ನು ತೆರೆಯಬೇಕು. ಈ ವಿಭಾಗ ಗೃಹ ಸಚಿವಾಲಯದಡಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಸರ್ಕಾರಕ್ಕೆ ಸೂಚಿಸಿದರು. ಬರುವ ಮಹಾ ಶಿವರಾತ್ರಿಯ ನಂತರ ರಾಮ ಮಂದಿರ ನಿರ್ಮಾಣ ಪ್ರಾರಂಭವಾಗುವುದಾಗಿ ಹೇಳಿದ ಸಿಂಘಾಲ್, ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಸಂಭವಿಸಿದ ಗೋಲಿಬಾರ್ ಸಾವಿನ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
(ಪಿಟಿಐ)
Post Your Views
ಮುಖಪುಟ / ಭಯೋತ್ಪಾದನೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications