ಕಾಬೂಲ್ ಮಾತುಕತೆಗೆ ಲೆ.ಜ. ಮೊಹಮ್ಮದ್ ನೇತೃತ್ವದ ನಿಯೋಗ
ಇಸ್ಲಾಮಾಬಾದ್ : ಶಂಕಿತ ಭಯೋತ್ಪಾದಕ ಒಸಮಾ ಬಿನ್ ಲಾಡೆನ್ನನ್ನು ಅಮೆರಿಕಕ್ಕೆ ಒಪ್ಪಿಸುವಂತೆ ಮಾತುಕತೆ ನಡೆಸುವ ಸಲುವಾಗಿ ಪಾಕಿಸ್ತಾನವು ಐ.ಎಸ್.ಐ. ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮೊಹಮದ್ ಅಹ್ಮದ್ ನೇತೃತ್ವದ 6 ಸದಸ್ಯರ ನಿಯೋಗವನ್ನು ನಿಯೋಜಿಸಿದೆ.
ಈ ನಿಯೋಗವು ತಾಲಿಬಾನ್ ನಾಯಕರೊಂದಿಗೆ ಮಾತುಕತೆ ನಡೆಸಲು ಆಫ್ಘಾನಿಸ್ತಾನದ ಕಂದಹಾರ್ ನಗರಕ್ಕೆ ಸೋಮವಾರ ತೆರಳುತ್ತಿದೆ. ಕೇವಲ ಒಬ್ಬ ವ್ಯಕ್ತಿಯ ಸಲುವಾಗಿ 25 ದಶಲಕ್ಷ ಅಮಾಯಕ ಜನರನ್ನು ಬಲಿಕೊಡುವುದು ತರವಲ್ಲ ಎಂದು ಈ ನಿಯೋಗ ತಾಲಿಬಾನ್ ಆಡಳಿತದ ಮನವೊಲಿಸುವ ಪ್ರಯತ್ನ ಮಾಡಲಿದೆ ಎಂದು ಸ್ಥಳೀಯ ಸುದ್ದಿ ಮಾಧ್ಯಮಗಳ ವರದಿ ಹೇಳಿದೆ.
ಪಾಕ್ ಆಂತರಿಕ ಮಾಧ್ಯಮಗಳ ರೀತ್ಯ ಈ ನಿಯೋಗವು ಆಫ್ಘಾನಿಸ್ತಾನದ ಮಿಲಿಟರಿ ಆಡಳಿತಕ್ಕೆ ಬಿನ್ ಲಾಡೆನ್ನನ್ನು ಒಪ್ಪಿಸಲು 3 ದಿನಗಳ ಗಡುವು ನೀಡಲಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮೂಲಗಳ ಸಮಜಾಯಿಷಿ ಈವರೆಗೆ ಲಭ್ಯವಾಗಿಲ್ಲ.
ಪಾಕಿಸ್ತಾನದಿಂದ ಕಾಬೂಲ್ಗೆ ತೆರಳುತ್ತಿರುವ ನಿಯೋಗದಲ್ಲಿ ಆಫ್ಘಾನಿಸ್ತಾನದ ರಾಜಭಾರಿಯಾಗಿ ಸೇವೆ ಸಲ್ಲಿಸಿದ್ದ ಹಾಲಿ ವಿದೇಶಾಂಗ ವ್ಯವಹಾರಗಳ ಖಾತೆಯ ಹೆಚ್ಚುವರಿ ಕಾರ್ಯದರ್ಶಿ ಅಜೀಜ್ ಖಾನ್ ಸಹ ಇದ್ದಾರೆ ಎಂದು ವರದಿಗಳು ಹೇಳಿವೆ.
(ಪಿ.ಟಿ.ಐ)
ಲಾಡೆನ್ನನ್ನು ಅಮೆರಿಕೆಗೆ ಒಪ್ಪಿಸಲು ತಾಲಿಬಾನ್ಗೆ ಪಾಕ್ ಗಡುವು
Post Your Views
ಮುಖಪುಟ / ಭಯೋತ್ಪಾದನೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications