ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹುಬ್ಬಳ್ಳಿಯಲ್ಲಿ ಮತ್ತೆ ಕದಡಿದ ಶಾಂತಿ: ಇರಿತ, ಕರ್ಫ್ಯೂ ವಿಸ್ತರಣೆ

By Staff
|
Google Oneindia Kannada News

ಹುಬ್ಬಳ್ಳಿ : ನಗರದಲ್ಲಿ ಸೋಮವಾರ ಸಂಜೆ ಹಿಂಸಾಚಾರ ಮತ್ತೆ ಆರಂಭವಾಗಿದ್ದು, ಮೂವರು ವ್ಯಕ್ತಿಗಳು ಚೂರಿ ಇರಿತದಿಂದ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ವರದಿ ತಿಳಿಸಿದೆ.

ಸಂಜೆ ವೇಳೆಗೆ ದುಷ್ಕರ್ಮಿಗಳ ಗುಂಪೊಂದು ಕಸಬಾ ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳ ಮೇಲೆ ಚೂರಿಯಿಂದ ಇರಿದು ಪರಾರಿಯಾಗಿದೆ. ಗಾಯಗೊಂಡವರನ್ನು ಪ್ರಭು ಮಮದಾಪುರ(28), ರಮೇಶ ಕೃಷ್ಣಾಜಿ( 35), ಸುನೀಲ್‌ ವಿಶ್ವನಾಥ್‌(22) ಎಂದು ಗುರುತಿಸಲಾಗಿದೆ.

ನಗರದ ದುರ್ಗಬೈಲ್‌, ನಗರ ಸಾರಿಗೆ ಬಸ್‌ ನಿಲ್ದಾಣ ಹಾಗೂ ಗಣೇಶ ಪೇಟೆಗಳಲ್ಲಿ ಕಲ್ಲು ತೂರಾಟ, ಬೆಂಕಿ ಹಚ್ಚುವ ಘನೆಗಳು ನಡೆದಿವೆ ಎಂದು ಪೊಲೀಸ್‌ಕಮಿಶನರ್‌ ವೈ. ಆರ್‌. ಪಾಟೀಲ ತಿಳಿಸಿದ್ದಾರೆ. ಅಲ್ಲದೆ ಕೆಲವೆಡೆ ಕಲ್ಲು ತೂರಾಟ ನಡೆದ ಘಟನೆಗಳೂ ವರದಿಯಾಗಿವೆ.

ಈ ಘಟನೆಯಿಂದ ನಗರದಲ್ಲಿ ಮತ್ತೆ ಪರಿಸ್ಥಿತಿ ಬಿಗಿಗೊಂಡಿದ್ದು, ನೂರಾರು ಮಂದಿಯನ್ನುಪೊಲೀಸರು ಬಂಧಿಸಿದ್ದಾರೆ. ಕೆಲವು ಪ್ರದೇಶಗಳಲ್ಲಿ ಮತ್ತೆ ಸಣ್ಣ ಪುಟ್ಟ ಹಿಂಸಾಚಾರದ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಪೊಲೀಸರು ಕರ್ಫ್ಯೂವನ್ನು ಮತ್ತೆ ವಿಸ್ತರಿಸಿದ್ದಾರೆ.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X