ಹುಬ್ಬಳ್ಳಿಯಲ್ಲಿ ಮತ್ತೆ ಕದಡಿದ ಶಾಂತಿ: ಇರಿತ, ಕರ್ಫ್ಯೂ ವಿಸ್ತರಣೆ
ಹುಬ್ಬಳ್ಳಿ : ನಗರದಲ್ಲಿ ಸೋಮವಾರ ಸಂಜೆ ಹಿಂಸಾಚಾರ ಮತ್ತೆ ಆರಂಭವಾಗಿದ್ದು, ಮೂವರು ವ್ಯಕ್ತಿಗಳು ಚೂರಿ ಇರಿತದಿಂದ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರದಿ ತಿಳಿಸಿದೆ.
ಸಂಜೆ ವೇಳೆಗೆ ದುಷ್ಕರ್ಮಿಗಳ ಗುಂಪೊಂದು ಕಸಬಾ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳ ಮೇಲೆ ಚೂರಿಯಿಂದ ಇರಿದು ಪರಾರಿಯಾಗಿದೆ. ಗಾಯಗೊಂಡವರನ್ನು ಪ್ರಭು ಮಮದಾಪುರ(28), ರಮೇಶ ಕೃಷ್ಣಾಜಿ( 35), ಸುನೀಲ್ ವಿಶ್ವನಾಥ್(22) ಎಂದು ಗುರುತಿಸಲಾಗಿದೆ.
ನಗರದ ದುರ್ಗಬೈಲ್, ನಗರ ಸಾರಿಗೆ ಬಸ್ ನಿಲ್ದಾಣ ಹಾಗೂ ಗಣೇಶ ಪೇಟೆಗಳಲ್ಲಿ ಕಲ್ಲು ತೂರಾಟ, ಬೆಂಕಿ ಹಚ್ಚುವ ಘನೆಗಳು ನಡೆದಿವೆ ಎಂದು ಪೊಲೀಸ್ಕಮಿಶನರ್ ವೈ. ಆರ್. ಪಾಟೀಲ ತಿಳಿಸಿದ್ದಾರೆ. ಅಲ್ಲದೆ ಕೆಲವೆಡೆ ಕಲ್ಲು ತೂರಾಟ ನಡೆದ ಘಟನೆಗಳೂ ವರದಿಯಾಗಿವೆ.
ಈ ಘಟನೆಯಿಂದ ನಗರದಲ್ಲಿ ಮತ್ತೆ ಪರಿಸ್ಥಿತಿ ಬಿಗಿಗೊಂಡಿದ್ದು, ನೂರಾರು ಮಂದಿಯನ್ನುಪೊಲೀಸರು ಬಂಧಿಸಿದ್ದಾರೆ. ಕೆಲವು ಪ್ರದೇಶಗಳಲ್ಲಿ ಮತ್ತೆ ಸಣ್ಣ ಪುಟ್ಟ ಹಿಂಸಾಚಾರದ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಪೊಲೀಸರು ಕರ್ಫ್ಯೂವನ್ನು ಮತ್ತೆ ವಿಸ್ತರಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications