ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂತರರಾಷ್ಟ್ರೀಯ ಚಿತ್ರೋತ್ಸವ ಮೂಂದೂಡಲುರಾಜ್ಯ ಸರ್ಕಾರದ ಮನವಿ

By Staff
|
Google Oneindia Kannada News

ಬೆಂಗಳೂರು : ಅಕ್ಟೋಬರ್‌ 10 ರಿಂದ 20 ರವರೆಗೆ ಬೆಂಗಳೂರಿನಲ್ಲಿ ಜರುಗುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಬೇಕೆ ಬೇಡವೇ ಎನ್ನುವ ಚರ್ಚೆಗೆ ಮತ್ತೆ ಚಾಲನೆ ದೊರಕಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಚಲನಚಿತ್ರೋತ್ಸವವನ್ನು ಮುಂದೂಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿರುವುದರಿಂದ ಈ ರೀತಿಯ ಉತ್ಸವ ನಡೆಸುವುದು ಸರಿಯಲ್ಲ ಎನ್ನುವ ಅಭಿಪ್ರಾಯವನ್ನು ರಾಜ್ಯ ಸರ್ಕಾರ ವ್ಯಕ್ತಪಡಿಸಿದ್ದು , ಚಿತ್ರೋತ್ಸವನ್ನು ಮುಂದೂಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ವಾರ್ತಾ ಸಚಿವ ಎಂ.ಶಿವಣ್ಣ ಈ ವಿಷಯವನ್ನು ತಿಳಿಸಿದ್ದಾರೆ.

ಬರದಿಂದ ಜನತೆ ಸಂಕಷ್ಟಕ್ಕೆ ಸಿಲುಕಿರುವಾಗ, ಅನೇಕ ಮಂದಿ ಹಸಿವಿನಿಂದ ನರಳುತ್ತಿರುವಾಗ ಚಿತ್ರೋತ್ಸವ ನಡೆಸುವುದು ಸರಿಯಲ್ಲ ಎನ್ನುವ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಈಗಾಗಲೇ ಶೇ.70 ರಷ್ಟು ಚಿತ್ರೋತ್ಸವದ ಸಿದ್ಧತೆಗಳು ಮುಗಿದಿವೆ ಎಂದು ಸಚಿವ ಶಿವಣ್ಣ ತಿಳಿಸಿದ್ದಾರೆ.

(ಇನ್ಫೋ ವಾರ್ತೆ)

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X