ಒಸಾಮಾ ಬಿನ್ ಲಾಡೆನ್ ಹಣೆಬರಹ ನಿರ್ಧರಿಸುವ ಸಭೆ ಮುಂದಕ್ಕೆ
ಕಾಬೂಲ್ : ಅಂತಾರಾಷ್ಟ್ರೀಯ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ನನ್ನು ಅಮೆರಿಕಕ್ಕೆ ಒಪ್ಪಿಸಬೇಕೆ ಬೇಡವೆ ಎಂಬುದನ್ನು ನಿರ್ಧರಿಸಲು ಆಫ್ಘಾನಿಸ್ತಾನದಲ್ಲಿ ಮಂಗಳವಾರ ನಡೆಯಬೇಕಿದ್ದ ಉಲೇಮಾಗಳ (ಇಸ್ಲಾಮಿಕ್ ಪಂಡಿತರ) ಸಭೆಯನ್ನು ಮುಂದೂಡಲಾಗಿದೆ ಎಂದು ತಾಲಿಬಾನ್ ಮೂಲಗಳು ಹೇಳಿವೆ.
ಗೈರು ಹಾಜರಿ : ಸಭೆಯಲ್ಲಿ ಪಾಲ್ಗೊಳ್ಳಬೇಕಿದ್ದ ಪಂಡಿತರು ಇನ್ನೂ ರಾಜಧಾನಿಗೆ ಆಗಮಿಸದ ಕಾರಣ ಸಭೆಯನ್ನು ಮುಂದೂಡಲಾಗಿದೆ ಎಂದೂ ಮೂಲಗಳು ಹೇಳಿವೆ. ಈ ಸಭೆಯು ಬುಧವಾರ ಇಲ್ಲವೇ ಗುರುವಾರ ನಡೆಯಬಹುದು ಎಂದು ಮೂಲಗಳು ತಿಳಿಸಿರುವುದಾಗಿ ಎಎಫ್ಪಿ ವಾರ್ತಾ ಸಂಸ್ಥೆಗೆ ವರದಿ ಮಾಡಿದೆ.
ಬಹುಪಾಲು ಇಸ್ಲಾಮಿಕ್ ಪಂಡಿತರ ಗೈರು ಹಾಜರಿಯೇ ಮಂಗಳವಾರದ ಸಭೆ ಮುಂದೂಡಲು ಕಾರಣ ಎಂದು ತಾಲಿಬಾನ್ ಶಿಕ್ಷಣ ಸಚಿವ ಅಮೀರ್ ಖಾನ್ ಮುತ್ತಖಿ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಪಾಕಿಸ್ತಾನ ಮೂಲದ ಆಫ್ಘನ್ ಇಸ್ಲಾಮಿಕ್ ಪ್ರೆಸ್ ವರದಿ ಮಾಡಿದೆ.
ಆದರೆ, ದೂರದ ಪ್ರಾಂತ್ಯಗಳಿಂದ ಪಂಡಿತರು ಆಗಮಿಸುತ್ತಿದ್ದು, ಮಂಗಳವಾರ ಮಧ್ಯಾಹ್ನ ಸಭೆ ಆರಂಭವಾಗಬಹುದು ಎಂಬ ಆಶಾಭಾವನೆಯನ್ನು ಕಾಬೂಲ್ ಮೇಯರ್ ಮುಲ್ಲಾ ಹಮದ್ಉಲ್ಲಾ ನೊಮಾನಿ ವ್ಯಕ್ತಪಡಿಸಿದ್ದಾರೆ.
ಕಳೆದ ಮಂಗಳವಾರ ಅಮೆರಿಕದ ಪೆಂಟಗಾನ್ ಹಾಗೂ ವಿಶ್ವ ವ್ಯಾಪಾರ ಕೇಂದ್ರಗಳ ಅವಳಿ ಗಗನಚುಂಬಿ ಕಟ್ಟಡಗಳ ಮೇಲೆ ನಡೆದ ವಿಧ್ವಂಸಕ ಕೃತ್ಯಕ್ಕೆ ಲಾಡೆನ್ನೇ ಪ್ರಮುಖ ಹೊಣೆಗಾರ ಎಂದು ಅಮೆರಿಕಾ ಹೇಳಿದ್ದು, ಆತನನ್ನು ಜೀವಂತ ಇಲ್ಲವೇ ಶವವಾಗಿಯಾದರೂ ಒಪ್ಪಿಸುವಂತೆ ತಿಳಿಸಿತ್ತು.
ಈ ಮಧ್ಯೆ ಕೇವಲ ಒಬ್ಬ ವ್ಯಕ್ತಿಗಾಗಿ ಲಕ್ಷಾಂತರ ಆಫ್ಘನ್ನರ ಬಲಿ ಕೊಡದಂತೆ ಪಾಕಿಸ್ತಾನ ರಾಜತಾಂತ್ರಿಕರು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಒಸಮಾ ಬಿನ್ ಲಾಡೆನ್ನ ಅಳಿವು - ಉಳಿವಿನ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಮಂಗಳವಾರ ಮಧ್ಯಾಹ್ನ ಎಲ್ಲ ಪ್ರಾಂತ್ಯಗಳ ಇಸ್ಲಾಮಿಕ್ ಪಂಡಿತ ಪ್ರತಿನಿಧಿಗಳ ಸಭೆ ಕರೆಯಲಾಗಿತ್ತು.
ವಾಷಿಂಗ್ಟನ್ ವರದಿ : ಸಹಸ್ರಾರು ಅಮಾಯಕರನ್ನು ಬಲಿತೆಗೆದುಕೊಂಡ ಒಸಾಮಾ ಬಿನ್ ಲಾಡೆನ್ ಬಗ್ಗೆ ಅಮೆರಿಕಕ್ಕೆ ದ್ವೇಷವಿದೆಯೇ ವಿನಾ, ನಮಗೆ ಆಫ್ಘಾನಿಸ್ತಾನದ ಮೇಲೆ ಯಾವುದೇ ಹಗೆ ಇಲ್ಲ ಎಂದು ಅಮೆರಿಕಾ ಹೇಳಿದೆ. ಈ ವಿಷಯವನ್ನು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಕಾಲಿನ್ ಪೋವೆಲ್ ಹೇಳಿದ್ದಾರೆ.
(ಎಎಫ್ಪಿ/ಇನ್ಫೋ ವಾರ್ತೆ)
ಮುಖಪುಟ / ಭಯೋತ್ಪಾದನೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications