ಸೆಪ್ಟೆಂಬರ್ 18, 2001 ಭಯೋತ್ಪಾದನೆ ವಿರುದ್ಧ ಐಕ್ಯತಾ ದಿನ
ನವದೆಹಲಿ : ಭಯೋತ್ಪಾದನೆ ಭಾರತವನ್ನು ಹಲವು ದಶಕಗಳಿಂದ ಕಾಡುತ್ತಿರುವ ಪರಮ ಶತ್ರು. ಈ ಭಯೋತ್ಪಾದನೆಗೆ ಹಲವು ಅಮಾಯಕರ ಬಲಿ ಆಗಿದೆ. ಈಗ ಭಯೋತ್ಪಾದನೆ ವಿಶ್ವವ್ಯಾಪಿ ಆಗುತ್ತಿದೆ. ಕಳೆದ ಮಂಗಳವಾರ ಅಮೆರಿಕದ ಮೇಲೆ ನಡೆದ ಉಗ್ರರ ದಾಳಿ ಸಾವಿರಾರು ಜನರನ್ನು ಬಲಿತೆಗೆದುಕೊಂಡಿದೆ.
ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಭಾರತ ಸರಕಾರ ಸೆಪ್ಟೆಂಬರ್ 18, 2001ರ ಮಂಗಳವಾರವನ್ನು ‘ಭಯೋತ್ಪಾದನೆ ವಿರುದ್ಧದ ಐಕ್ಯತಾ ದಿನ’ವಾಗಿ ಆಚರಿಸಲು ನಿರ್ಧರಿಸಿತು. ಮಂಗಳವಾರ ಬೆಳಗ್ಗೆ 10.30ಕ್ಕೆ ನೀವು ಎಲ್ಲೇ ಇರಿ. ಭಯೋತ್ಪಾದಕರ ದಾಳಿಯಿಂದ ಮೃತರಾದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು 2 ನಿಮಿಷಗಳ ಕಾಲ ಮೌನ ಆಚರಿಸಿ, ಮೌನ ಪ್ರಾರ್ಥನೆಯ ಮೂಲಕ ಮೌನ ನಿರ್ಣಯ ಕೈಗೊಳ್ಳೋಣ ಎಂದು ಸರಕಾರ ನಾಗರಿಕರಲ್ಲಿ ಮನವಿ ಮಾಡಿದೆ.
ಈ ಸಂಬಂಧ ಹೇಳಿಕೆ ನೀಡಿರುವ ಪ್ರಧಾನಿ ವಾಜಪೇಯಿ ಅವರು, ‘ಪ್ರತಿಯಾಬ್ಬ ಭಾರತೀಯನೂ ಭಯೋತ್ಪಾದನೆ ವಿರುದ್ಧ ನಡೆದಿರುವ ಈ ಜಾಗತಿಕ ಯುದ್ಧದಲ್ಲಿ ಭಾಗಿಯಾಗಬೇಕು...
ನಮ್ಮ ನೆಲದಿಂದ ಹಾಗೂ ವಿಶ್ವದಿಂದ ಈ ದುಷ್ಕೃತ್ಯವನ್ನು ನಾವು ತೊಡೆದು ಹಾಕಲೇಬೇಕು.... ತೊಡೆದು ಹಾಕೋಣ’ ಎಂದು ಕರೆ ಕೊಟ್ಟಿದ್ದಾರೆ.
1993ರ ಮಾರ್ಚ್ನಲ್ಲಿ ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ, 2001ರಂದು ಅನಂತ್ನಾಗ್ನಲ್ಲಿ ನಡೆದ ಸಾಮೂಹಿಕ ಹತ್ಯಾಕಾಂಡ, ಡಿಸೆಂಬರ್ 1999ರಲ್ಲಿ ನಡೆದ ಕಂದಹಾರ್ ವಿಮಾನ ಅಪಹರಣ ಹಾಗೂ ಕಳೆದ ಕರಾಳ ಮಂಗಳವಾರ ನ್ಯೂಯಾರ್ಕ್ ವಿಶ್ವ ವ್ಯಾಪಾರ ಕೇಂದ್ರದ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಅವರು ಸ್ಮರಿಸಿದ್ದಾರೆ.
(ಇನ್ಫೋ ವಾರ್ತೆ)
Post Your Views
ಮುಖಪುಟ / ಭಯೋತ್ಪಾದನೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications