ಯುದ್ಧ ಕ್ಷಣಗಣನೆ.. ತಾಲಿಬಾನ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ಇಸ್ಲಮಾಬಾದ್ : ಸಂಭವನೀಯ ಅಮೆರಿಕ ದಾಳಿಯ ಹಿನ್ನೆಲೆಯಲ್ಲಿ ತಾಲಿಬಾನ್ ಆಡಳಿತ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದು , ಯುದ್ಧ ಚಟುವಟಿಕೆಗಳನ್ನು ಚುರುಕುಗೊಳಿಸಿದೆ.
ಎಲ್ಲ ಧಾರ್ಮಿಕ ಪಾಠಶಾಲೆಗಳನ್ನು ಮುಚ್ಚಿರುವ ತಾಲಿಬಾನ್ ಆಡಳಿತ, ಮರು ಹೋರಾಟಕ್ಕೆ ವಿದ್ಯಾರ್ಥಿಗಳನ್ನು ಶಸ್ತ್ರ ಸಜ್ಜಿತರನ್ನಾಗಿಸಿದೆ ಎಂದು ತಾಲಿಬಾನ್ನ ಹಿರಿಯ ಅಧಿಕಾರಿಯಾಬ್ಬರು ತಿಳಿಸಿದ್ದಾರೆ. ಇದರಿಂದಾಗಿ ಅಮೆರಿಕ ಹಾಗೂ ತಾಲಿಬಾನ್ ನಡುವಣ ತಿಕ್ಕಾಟ ಹೆಚ್ಚೂ ಕಡಿಮೆ ಆರಂಭವಾದಂತಾಗಿದೆ.
ಪ್ರಸ್ತುತ ಕಾಂದಹಾರ್ನ ಮೈದಾನದಲ್ಲಿ ಕೇಂದ್ರೀಕೃತವಾಗಿರುವ ತಾಲಿಬಾನ್ನ ವಾಯುಶಕ್ತಿ, ಹಾರಾಟದ ಅಭ್ಯಾಸಗಳನ್ನು ನಡೆಸಿದೆ. ಈ ವಾಯುಪಡೆ ಯಾವುದೇ ಕ್ಷಣದ ದಾಳಿಯನ್ನು ಎದುರಿಸಲು ಸಿದ್ಧವಾಗಿದೆ. ಧಾರ್ಮಿಕ ಶಾಲೆಗಳನ್ನು ಮುಚ್ಚಲಾಗಿದ್ದು , ವಿದ್ಯಾರ್ಥಿಗಳು ಯಾವುದೇ ಹೋರಾಟ ಎದುರಿಸಲು ಸಿದ್ಧರಿದ್ದಾರೆ ಎಂದು ಕಾಂದಹಾರ್ನ ರಾಜ್ಯಪಾಲ ಮೌಲ್ವಿ ಮಹಮದ್ ಹಸನ್ ತಿಳಿಸಿರುವುದಾಗಿ ಉರ್ದು ದೈನಿಕ ಜಂಗ್ ವರದಿ ಮಾಡಿದೆ.
ತಾಲಿಬಾನ್ ಎಂದಿಗೂ ದಾಸ್ಯವನ್ನು ಒಪ್ಪಿಕೊಳ್ಳುವುದಿಲ್ಲ
ಈ ಮುನ್ನ ಆಪ್ಘಾನಿಸ್ತಾನವನ್ನು ಆಕ್ರಮಿಸಿದ ರಷ್ಯಾದ ಗತಿ ಏನಾಯಿತು ಎನ್ನುವುದನ್ನು ತಾಲಿಬಾನ್ ಅರ್ಥ ಮಾಡಿಕೊಳ್ಳಬೇಕು ಎಂದು ಹಸನ್ ಅಮೆರಿಕವನ್ನು ಎಚ್ಚರಿಸಿದ್ದಾರೆ.
ತಾಲಿಬಾನ್ ಮೇಲೆ ದಾಳಿ ನಡೆಸಲು ತನ್ನ ನೆಲವನ್ನು ಬಳಸಿಕೊಳ್ಳಲು ಪಾಕಿಸ್ತಾನ ಅವಕಾಶ ಮಾಡಿಕೊಡಬಾರದು. ಈ ರೀತಿ ಅವಕಾಶ ಕಲ್ಪಿಸುವುದು ಇಸ್ಲಾಂಗೆ ಅವಮಾನ. ಒಂದು ವೇಳೆ ಅಮೆರಿಕಾಗೆ ಸಹಾಯ ಮಾಡಿದಲ್ಲಿ ಪಾಕಿಸ್ತಾನದ ಮೇಲೆ ತಾಲಿಬಾನ್ ದಾಳಿ ನಡೆಸುವುದೆಂದು ಈಗಾಗಲೇ ಎಚ್ಚರಿಸಲಾಗಿದೆ ಎಂದು ಹಸನ್ ಹೇಳಿದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications