ಲಾಡೆನ್ನನ್ನು ಬೇಷರತ್ತಾಗಿ ಒಪ್ಪಿಸಲು ತಾಲಿಬಾನ್ಗೆ ವಿಶ್ವಸಂಸ್ಥೆ ಸೂಚನೆ
ವಿಶ್ವಸಂಸ್ಥೆ : ಅಮೆರಿಕ ಮೇಲೆ ಕಳೆದ ಮಂಗಳವಾರ ನಡೆದ ಭಯೋತ್ಪಾದಕ ದಾಳಿಗೆ ಕಾರಣ ಎನ್ನಲಾಗಿರುವ ಒಸಾಮಾ ಬಿನ್ ಲಾಡೆನ್ನನ್ನು ಬೇಷರತ್ತಾಗಿ ಹಾಗೂ ತತ್ಕ್ಷಣವೇ ಒಪ್ಪಿಸುವಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಆಫ್ಘಾನಿಸ್ತಾನದ ಮಿಲಿಟರಿ ಆಡಳಿತಕ್ಕೆ ಸೂಚಿಸಿದೆ.
ಯಾವುದೇ ಷರತ್ತುಗಳನ್ನು ವಿಧಿಸದೆ, ಕೂಡಲೇ ಶಂಕಿತ ಉಗ್ರಗಾಮಿ ನಾಯಕ ಲಾಡೆನ್ನನ್ನು ಅಮೆರಿಕ ವಶಕ್ಕೆ ಒಪ್ಪಿಸುವಂತೆ ಭದ್ರತಾ ಮಂಡಳಿಯ ಅಧ್ಯಕ್ಷ ಜೀನ್ ಡೇವಿಡ್ ಲೆವಿಟ್ಟೆ ಅವರು ತಿಳಿಸಿದ್ದಾರೆ. ಸೌದಿ ಮೂಲದ ಆತಂಕವಾದಿ ಲಾಡೆನ್ನೇ ಮಂಗಳವಾರದ ವಿಧ್ವಂಸಕ ಕೃತ್ಯಕ್ಕೆ ಕಾರಣ ಎಂದು ಅಮೆರಿಕಾ ಘೋಷಿಸಿದೆ.
ಸುಮಾರು 6 ಸಾವಿರಕ್ಕೂ ಹೆಚ್ಚು ಅಮಾಯಕರನ್ನು ಬಲಿತೆಗೆದುಕೊಂಡಿರುವ ಮಂಗಳವಾರದ ದಾಳಿಗೆ ಸಂಬಂಧಿಸಿದಂತೆ ತಾಲಿಬಾನ್ ಸರಕಾರಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಈವರೆಗೆ ನೀಡಿರುವ ಏಕಮಾತ್ರ ಸಂದೇಶದಲ್ಲಿ ಲೆವಿಟ್ಟೆ ಮಂಗಳವಾರ ಈ ಸೂಚನೆ ನೀಡಿದ್ದಾರೆ.
ಸೆಪ್ಟೆಂಬರ್ 12ರಂದು ಭದ್ರತಾ ಮಂಡಳಿಯ 15 ಮಂದಿ ಸದಸ್ಯರ ಸಭೆಯಲ್ಲಿ ಅಂಗೀಕರಿಸಲಾಗಿದ್ದ ನಿರ್ಣಯವು ಅಮೆರಿಕಾ ಮೇಲಿನ ದಾಳಿಯನ್ನು ಉಗ್ರವಾಗಿ ಖಂಡಿಸಿತ್ತು. ಈ ವಿಧ್ವಂಸಕ ಕೃತ್ಯಕ್ಕೆ ಕಾರಣರಾದವರನ್ನು ಬಂಧಿಸಲು ಸಂಘಟಿತ ಹೋರಾಟಕ್ಕೆ ಅದು ಕರೆ ನೀಡಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.
ಉಲೇಮಾಗಳ ಸಭೆ : ಹಲವು ಪಾಂತ್ಯಗಳ ಉಲೇಮಾಗಳ (ಇಸ್ಲಾಮಿಕ್ ಪಂಡಿತರ) ಗೈರು ಹಾಜರಿಯಿಂದ ಮಂಗಳವಾರ ಮುಂದೂಡಲಾಗಿದ್ದ, ಸಭೆ ಬುಧವಾರ ನಡೆಯುತ್ತಿದೆ. ಈ ಸಭೆಯಲ್ಲಿ ಬಿನ್ ಲಾಡೆನ್ನನ್ನು ಅಮೆರಿಕಕ್ಕೆ ಒಪ್ಪಿಸಬೇಕೆ - ಬೇಡವೆ ಎಂದು ನಿರ್ಧರಿಸಲಾಗುತ್ತದೆ. ಈ ಮಧ್ಯೆ...
- ಆಫ್ಘಾನಿಸ್ತಾನಕ್ಕೆ ಆರ್ಥಿಕ ಅಥವಾ ಮಿಲಿಟರಿ ನೆರವು ನೀಡಿಲ್ಲ ಎಂದು ಪಾಕಿಸ್ತಾನ ಸ್ಪಷ್ಟನೆ ನೀಡಿದೆ.
- ಆಂತರಿಕ ಬಿಕ್ಕಟ್ಟು ತಲೆದೋರಿರುವ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಪಾಕ್ ಅಧ್ಯಕ್ಷ ಮುಷರ್ರಫ್ ರಾಷ್ಟ್ರವನ್ನುದ್ದೇಶಿಸಿ ಪ್ರಸಾರ ಭಾಷಣ ಮಾಡುತ್ತಿದ್ದಾರೆ.
- ಭಯೋತ್ಪಾದನೆ ವಿರುದ್ಧದ ವಿಶ್ವವ್ಯಾಪಿ ಹೋರಾಟದ ನೇತೃತ್ವ ವಹಿಸಿಕೊಳ್ಳಲು ವಿಶ್ವಸಂಸ್ಥೆ ಸಿದ್ಧವಿದೆ ಎಂದು ಮಹಾಕಾರ್ಯದರ್ಶಿ ಕೋಫಿ ಅನ್ನಾನ್ ಘೋಷಿಸಿದ್ದಾರೆ.
- ಭಯೋತ್ಪಾದನೆ ವಿರುದ್ಧ ನಡೆಯಲಿರುವ ಜಾಗತಿಕ ಸಮರದಲ್ಲಿ ಅಮೆರಿಕದೊಂದಿಗೆ ಕೈಜೋಡಿಸುವುದಾಗಿ ಪ್ಯಾಲೆಸ್ಟೀನಿಯನ್ ನಾಯಕ ಯಾಸಿರ್ ಅರಾಫತ್ ಅಮೆರಿಕ ಅಧ್ಯಕ್ಷ ಬುಷ್ ಅವರಿಗೆ ತಿಳಿಸಿದ್ದಾರೆ.
ಮುಖಪುಟ / ಭಯೋತ್ಪಾದನೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications